Sunday, August 2, 2026
Sunday, August 2, 2026

Siddaramaiah ಲಡಾಖ್ ನ ಪ್ರದೇಶ ಚೀನಾ ಅತಿಕ್ರಮ:ಪ್ರಧಾನಿ ಆಘಾತಕಾರಿ ಮೌನ- ಸಿದ್ಧರಾಮಯ್ಯ ಟೀಕಾಸ್ತ್ರ

Date:

Siddaramaiah ನೆರೆಯ ರಾಷ್ಟ್ರವಾದ ಚೀನಾ ಭಾರತದ ಗಡಿಭಾಗಗಳನ್ನು ಅತಿಕ್ರಮಿಸಿ ಭಾರತದ ನೆಲದಲ್ಲಿ ಸೇನಾ ನೆಲೆಗಳು, ಬಂಕರ್‌ಗಳು, ಹಳ್ಳಿಗಳನ್ನು ನಿರ್ಮಿಸಿದ್ದರೂ ಸಹ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಕಾರವೆತ್ತಿಲ್ಲ. ತಮ್ಮನ್ನು ವಿಶ್ವಗುರು, ಜಾಗತಿಕ ನೇತಾರ ಎಂದು ಬಿಂಬಿಸಿಕೊಳ್ಳುವ ಮೋದಿಯವರು ಲಡಾಖ್‌ನಲ್ಲಿ ಸುಮಾರು ನಾಲ್ಕು ಸಾವಿರ ಚ.ಕಿಮೀ ಪ್ರದೇಶವನ್ನು ಚೀನಾ ಆತಿಕ್ರಮಿಸಿ ಕೂತಿದ್ದರೂ ಚೀನಾದ ಪಡೆಗಳನ್ನು ಹಿಂದೆ ಕಳುಹಿಸುವ ಧೈರ್ಯ ತೋರಿಲ್ಲ. ಮೋದಿಯವರ ಆಘಾತಕಾರಿ ಮೌನದಿಂದಾಗಿ ನಮ್ಮ ಸೇನಾ ಪಡೆಗಳು ಗಸ್ತು ತಿರುಗುತ್ತಿದ್ದ ಅನೇಕ ಪ್ರದೇಶಗಳನ್ನು, ಗಸ್ತುಠಾಣೆಗಳಿದ್ದ ಆಯಕಟ್ಟಿನ ಜಾಗಗಳನ್ನು ಚೀನಾಗೆ ಬಿಟ್ಟುಕೊಡಲಾಗಿದೆ.

Siddaramaiah ಅರುಣಾಚಲ ಪ್ರದೇಶದಲ್ಲಿಯಂತೂ ಚೀನಾ ಭಾರತದ ನೆಲದಲ್ಲಿ ಹೆದ್ದಾರಿಗಳನ್ನು ಮಾಡಿ, ಹಳ್ಳಿಗಳನ್ನು ನಿರ್ಮಿಸಿದೆ. ಉಪಗ್ರಹ ಚಿತ್ರಗಳು ಈ ಎಲ್ಲದಕ್ಕೂ ದಾಖಲೆ ನೀಡುತ್ತಿವೆ. ಆದರೆ, ಕಾಗದದ ಹುಲಿ ಮೋದಿ ಮಾತ್ರ ಕಣ್ಣುಮುಚ್ಚಿ ಕೂತಿದ್ದಾರೆ. ಮೋದಿ ಆಡಳಿತದಲ್ಲಿ ಭಾರತದ ಸಾರ್ವಭೌಮತೆ, ಅಖಂಡತೆಗೆ ಇನ್ನಿಲ್ಲದ ಧಕ್ಕೆ ಒದಗಿದೆ. ಬಡಾಯಿ ವೀರ ಮೋದಿಯವರ ಹೇಡಿತನದಿಂದಾಗಿ ಭಾರತದ ವೀರ ಸೈನಿಕರು ಇಂದು ಎದುರಾಳಿಗಳ ಮುಂದೆ ತಮ್ಮದೇ ನೆಲದಲ್ಲಿ ಕೈಕಟ್ಟಿ ನಿಲ್ಲುವ ಪರಿಸ್ಥಿತಿ ಬಂದಿದೆ. ಚೀನಾ ಅತಿಕ್ರಮಣ ವಿಚಾರದಲ್ಲಿ ತಮ್ಮ ವೈಫಲ್ಯತೆ, ಹುಳುಕುಗಳನ್ನು ಮುಚ್ಚಿಟ್ಟುಕೊಳ್ಳುವ ಸಲುವಾಗಿ ಹೇಡಿ ಮೋದಿ ದೇಶದ ಜನತೆಯಿಂದ ಸತ್ಯವನ್ನು ಮುಚ್ಚಿಟ್ಟು ದ್ರೋಹ ಎಸಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...