Monday, February 2, 2026
Monday, February 2, 2026

Lok Sabha Election ಚುನಾವಣಾ ಮತದಾನ ರಥಕ್ಕೆ ಚಾಲನೆ

Date:

Lok Sabha Election ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಲು ಜಾಗೃತಿ ಮೂಡಿಸುವ ಸಲುವಾಗಿ ಇಂದು ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಹಾಗೂ ಎಸ್‍ಪಿ ಮಿಥುನ್ ಕುಮಾರ್ ಮತದಾನ ಜಾಗೃತಿ ರಥಕ್ಕೆ ಚಾಲನೆ ನೀಡಿದರು.

ಮತದಾನ ಜಾಗೃತಿ ರಥವು ಜಿಲ್ಲೆಯಲ್ಲಿ ಕಳೆದ ಬಾರಿಯ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಮತದಾನವಾದ 148 ಮತಗಟ್ಟೆಗಳಲ್ಲಿ ಹಾಗೂ ನಗರ ಪ್ರದೇಶದಲ್ಲಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ 10 ದಿನಗಳ ಕಾಲ ಮತದಾನದ ಕುರಿತು ವಿವಿಧ ವಿಡಿಯೋ ಹಾಗೂ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಲಿದೆ.

Lok Sabha Election ಇದೇ ವೇಳೆ ಜಿಲ್ಲಾಧಿಕಾರಿಗಳು ಚುನಾವಣಾ ಐಕಾನ್‍ಗಳಿಗೆ ಚುನಾವಣಾ ಪ್ರತಿಜ್ಞಾ ವಿಧಿ ಪೋಸ್ಟರ್‍ನ್ನು ನೀಡಿ, ಚುನಾವಣಾ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ವೇಳೆ ಜಿ.ಪಂ ಸಿಪಿಓ ಗಾಯತ್ರಿ, ತಹಶೀಲ್ದಾರ್ ಪ್ರದೀಪ್, ಜಿಲ್ಲಾಡಳಿತ, ಜಿ.ಪಂ ಅಧಿಕಾರಿ, ಸಿಬ್ಬಂದಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ಚುನಾವಣಾ ಐಕಾನ್‍ಗಳಾದ ದೀಕ್ಷಿತ್, ಜ್ಯೋತಿ, ಡಾ.ಶುಭ್ರತಾ ಕೆ.ಎಸ್, ನಿವೇದನ್ ನೆಂಪೆ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...