Wednesday, August 12, 2026
Wednesday, August 12, 2026

Shikaripura Police ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನಿರ್ಲಕ್ಷ್ಯ, ವೈದ್ಯಾಧಿಕಾರಿ ಮೇಲೆ ಕ್ರಮ ಜರುಗಿಸಲು ಆಗ್ರಹ

Date:

Shikaripura Police ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಎದುರು ಶನಿವಾರ ತಡರಾತ್ರಿ ಸಾರ್ವಜನಿಕರು ವೈದ್ಯರ ವಿರುದ್ಧ ಪ್ರತಿಭಟನೆಯನ್ನು ನಡೆಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ. ಗೋಪಾಲ ಅರಗಿ ಅವರು ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡದೆ ಕರ್ತವ್ಯ ಲೋಪ ಮಾಡುತ್ತಿದ್ದಾರೆ.ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ತಡರಾತ್ರಿ ವೈದ್ಯರು ಇಲ್ಲದೆ ಸಣ್ಣ ಮಗುವನ್ನು ಚಿಕಿತ್ಸೆಗೆ ಕರೆದೊಯ್ದ ಪೋಷಕರಿಗೆ ವೈದ್ಯರು ಸಿಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Shikaripura Police ಇದನ್ನು ಖಂಡಿಸಿ ಸ್ಥಳೀಯ ಪುರಸಭಾ ಸದಸ್ಯ ಪ್ರಶಾಂತ್ ಜಿನಳ್ಳಿ ಅವರ ನೇತೃತ್ವದಲ್ಲಿ ಸಾರ್ವಜನಿಕರು ಆಸ್ಪತ್ರೆ ಎದುರು ಪ್ರತಿಭಟನೆಯನ್ನು ನಡೆಸಿದರು. ನಿರ್ಲಕ್ಷ ತೋರಿದ ವೈದ್ಯ ಡಾ. ಗೋಪಾಲ್ ಅರಗಿ, ಅವರನ್ನು ಕೂಡಲೇ ವಜಾಗೊಳಿಸಿ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...