Monday, February 2, 2026
Monday, February 2, 2026

Anavatti Police ಚಾಲಕನ ಚಾಕಚಕ್ಯತೆ, ಬಸ್ ಕೆರೆಗೆ ಬೀಳದೇ ಪ್ರಯಾಣಿಕರು ಪಾರು

Date:

Anavatti Police ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕೆರೆ ಕಂದಕಕ್ಕೆ ಇಳಿದ ಘಟನೆ ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಸಮೀಪ ಕೊರಕೋಡು ಕ್ರಾಸ್ ಬಳಿ ಸಂಭವಿಸಿದೆ.

ಭಾನುವಾರ ತಾಲೂಕಿನ ಆನವಟ್ಟಿಯಿಂದ ಸೊರಬ ಮಾರ್ಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್‌ನ ಚಾಲಕನ ನಿಯಂತ್ರಣ ತಪ್ಪಿದೆ. ಈ ಸಂದರ್ಭದಲ್ಲಿ ಪ್ರಯಾಣಿಕರು ಆತಂಕಗೊಂಡು ಕೂಗಾಡಿದ್ದಾರೆ. ಇನ್ನೇನು ಬಸ್ ಕೆರೆಯ ಕಂದಕಕ್ಕೆ ಉರುಳಿತು ಎನ್ನುವಷ್ಟರಲ್ಲಿ ಕೆರೆ ಏರಿ ಪಕ್ಕದ ತಡೆ ಕಲ್ಲು ಕಂಬಕ್ಕೆ ಚಕ್ರ ಸಿಲುಕಿ ಬಸ್‌ನ ವೇಗವನ್ನು ನಿಯಂತ್ರಿಸುವ ಮೂಲಕ ಪಲ್ಟಿ ಆಗದೇ ಸುರಕ್ಷಿತವಾಗಿ ಕೆರೆ ಕಂದಕಕ್ಕೆ ಇಳಿದಿದೆ.

Anavatti Police ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ೫೦ ಜನರು ಸುರಕ್ಷಿತವಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿರುವ ಪ್ರಯಾಣಿಕರನ್ನು ಸೊರಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...