Thursday, June 18, 2026
Thursday, June 18, 2026

Yugadhi Festival ಕುಂಚೇನಹಳ್ಳಿಯಲ್ಲಿ ಶಿವರಾಜ್ ಕುಮಾರ್ & ಗೀತಾ ಶಿವರಾಜ್ ಕುಮಾರ್ ಯುಗಾದಿ ಆಚರಣೆ ಸಡಗರ

Date:

Yugadhi Festival ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಅವರು ಏಪ್ರಿಲ್ ೯ರಂದು ಮಂಗಳವಾರ ಸಂಜೆ ೫ ಗಂಟೆಗೆ ಶಿವಮೊಗ್ಗ ತಾಲ್ಲೂಕಿನ ಕುಂಚೇನಹಳ್ಳಿಯಲ್ಲಿ ಯುಗಾದಿ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಲಂಬಾಣಿ ಸಮುದಾಯದ ಪ್ರಮುಖ ಹಬ್ಬ ‘ಆಟಮ್’ ಯುಗಾದಿ ಹಬ್ಬ ಆಚರಣೆಯಲ್ಲಿ ಮಂಗಳವಾರ ಸಂಜೆ ೫ ಗಂಟೆಗೆ ಶಿವಣ್ಣ ದಂಪತಿ ಭಾಗವಹಿಸಲಿದ್ದಾರೆ.

ಬಂಜಾರ ಸಮುದಾಯದ ಉಡುಗೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗ್ರಾಮಕ್ಕೆ ಆಗಮಿಸುವ ಗೀತಾ ಶಿವರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಅವರಿಗೆ ಲಂಬಾಣಿ ಸಮುದಾಯದ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು.

Yugadhi Festival ಬಳಿಕ ಅವರು ಸೇವಾಲಾಲ್ ದೇವಾಲಯ ಸೇರಿದಂತೆ ಗ್ರಾಮದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ದೇವರ ದರ್ಶನದ ಬಳಿಕ ಆಟಮ್ ಹಬ್ಬದ ಆಚರಣೆ ಸಂಪ್ರದಾಯ ಚಟುವಟಿಕೆಗಳಲ್ಲಿ ಭಾಗವಹಿಸಲಿದ್ದಾರೆ.

ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಆಗಮಿಸುತ್ತಿರುವುದು ಊರಿನ ಜನರ ಸಂಭ್ರಮ ಇಮ್ಮಡಿಕೊಳ್ಳುವಂತೆ ಮಾಡಿದೆ. ಅದರಲ್ಲಿಯೂ ಕುಂಚೇನಹಳ್ಳಿಯಲ್ಲಿ ಲಂಬಾಣಿ ಸಮುದಾಯದ ವಿಶೇಷ ಆಟಮ್ ಯುಗಾದಿ ಆಚರಣೆಯಲ್ಲಿ ದಂಪತಿ ಭಾಗವಹಿಸುತ್ತಿರುವುದು ಗ್ರಾಮದ ಜನರ ನಿರೀಕ್ಷೆ ಹೆಚ್ಚಿಸಿದೆ.

ಶಿವಣ್ಣ ದಂಪತಿ ಆಗಮನದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...