Monday, February 2, 2026
Monday, February 2, 2026

DDPI Hasana ಸರ್ಕಾರಿ ನೌಕರರಿಂದ ರಾಜಕೀಯ ಪಕ್ಷಗಳ ಪರ ಸಾಮಾಜಿಕ ತಾಣಗಳಲ್ಲಿ ಸಂದೇಶ ಹಂಚಿಕೆ ದಂಡನಾರ್ಹ

Date:

DDPI Hasana ರಾಜ್ಯ ಸರ್ಕಾರಿ ನೌಕರರು ರಾಜಕೀಯ ಪಕ್ಷಗಳ ಪರವಾಗಿ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ. ಒಂದು ವೇಳೆ ಯಾವುದೇ ಪಕ್ಷದ ಪರವಾಗಿ ಸಂದೇಶವನ್ನು ಫಾರ್ವರ್ಡ್ ಮಾಡಿದ್ರೂ, ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಸತ್ಯ ಗೊತ್ತಿದ್ರೂ ಹಾಸನದ ನೌಕರನೊಬ್ಬ ಯಾವುದೋ ಪಕ್ಷದ ಪರವಾಗಿ ಪ್ರಚಾರ ಮಾಡಿ ಅಮಾನತಾಗಿರುವ ಘಟನೆ ನಡೆದಿದೆ.

ಹಾಸನದ ಡಿಡಿಪಿಐ ಕಚೇರಿಯಲ್ಲಿ ಎಫ್ ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ಬಿ.ಹೆಚ್ ಮಂಜುನಾಥ್ ಎಂಬುವರು ಬಿಜೆಪಿ ಪರವಿದ್ದಂತಹ ಸಂದೇಶವೊಂದನ್ನು ಪ್ರೀತಂ ಜೆ ಗೌಡ, ಹಾಸನ ಎಂಎಲ್‌ಎ ಎಂಬ ವಾಟ್ಸ್ ಆಪ್ ಗ್ರೂಪ್ ನಲ್ಲಿ ಶೇರ್ ಮಾಡಿದ್ದಾರೆ.
ಹೀಗೆ ಸರ್ಕಾರಿ ಅಧಿಕಾರಿಯಾಗಿದ್ದೂ, ಬಿಜೆಪಿ ಪರವಾಗಿದ್ದಂತ ಸಂದೇಶ ಫಾರ್ವರ್ಡ್ ಮಾಡಿದ್ದಕ್ಕೆ ಮಂಜುನಾಥ್ ವಿರುದ್ಧ ನಾಗೇಂದ್ರ ಎಂಬುವರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು.

DDPI Hasana ಈ ದೂರು ಆಧರಿಸಿ ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಬಿಹೆಚ್ ಮಂಜುನಾಥ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.

24 ಗಂಟೆಯೊಳಗೆ ಡಿಸಿಪಿಐಗೆ ಮಾಹಿತಿ ಒದಗಿಸಿ ಎಂದು ಎಡಿಸಿ ಶಾಂತಲಾ ಅವರು ಮಂಜುನಾಥ್ ಗೆ ನೋಟಿಸ್ ನೀಡಿದ್ದರು. ಅದರಂತೆ ಡಿಡಿಪಿಐ ಮಂಜುನಾಥ್ ವಿವರಣೆ ಕೇಳಿದ್ದರು. ಅವರ ವಿವರಣೆಯ ವರದಿಯನ್ನು ಸಹಾಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಲಾಗಿತ್ತು.

ಈ ವರದಿ ಆಧರಿಸಿ, ಪ್ರಥಮ ದರ್ಜೆ ಸಹಾಯಕ ಬಿಹೆಚ್ ಮಂಜುನಾಥ್ ಅನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...