Friday, September 27, 2024
Friday, September 27, 2024

Kuvempu University ಕುವೆಂಪು ವಿವಿಯ ಪ್ರೊ. ಬಿ.ತಿಪ್ಪೆಸ್ವಾಮಿ ಅವರ ಸಂಶೋಧನೆಗೆ ಪೇಟೆಂಟ್ ಮನ್ನಣೆ

Date:

Kuvempu University ಕುವೆಂಪು ವಿವಿಗೆ ಮತ್ತೊಂದು ರಾಷ್ಟ್ರಮಟ್ಟದ ಗರಿ : ಪ್ರೊ.ಬಿ.ತಿಪ್ಪೇಸ್ವಾಮಿಗೆ ಕೃಷಿ ಅನ್ವಯಿಕತೆಯಲ್ಲಿ ನ್ಯಾನೋ ಬಯೋ ಜಿ಼ಂಕ್ ಸಂರಚನೆ ಕುರಿತ ಆವಿಷ್ಕಾರಕ್ಕೆ ರಾಷ್ಟ್ರಮಟ್ಟದ ಪೇಟೆಂಟ್!

ಶಂಕರಘಟ್ಟ : ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೊಂದು ರಾಷ್ಟ್ರಮಟ್ಟದ ಮನ್ನಣೆ ದೊರಕಿದ್ದು, ಸೂಕ್ಷ್ಮಜೀವಿ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಅಧ್ಯಕ್ಷ ಪ್ರೊ. ಬಿ. ತಿಪ್ಪೇಸ್ವಾಮಿ ಅವರ “ಕೃಷಿ ಅನ್ವಯಿಕತೆಯಲ್ಲಿ ನ್ಯಾನೋ ಬಯೋ ಜಿ಼ಂಕ್ ಸಂರಚನೆ” ಎಂಬ ಸಂಶೋಧನಾ ಆವಿಷ್ಕಾರಕ್ಕೆ ಭಾರತ ಸರ್ಕಾರದ ಅಧಿಕೃತ ಪೇಟೆಂಟ್ ಇಲಾಖೆಯು ಪೇಟೆಂಟ್ ನೀಡಿದೆ.

ಸಂಶೋಧಕರಾದ ಪ್ರೊ. ಬಿ ತಿಪ್ಪೇಸ್ವಾಮಿ ಮತ್ತು ಅಮಿತಾ ಗಣಪತಿ ಬಿ ಒಟ್ಟುಗೂಡಿ ನ್ಯಾನೋ ಬಯೋ ಜಿಂಕ್ ರಾಸಾಯನಿಕದ ಸಂರಚನೆಯನ್ನು ಕೃಷಿಯ ವಿವಿಧ ಉತ್ಪನ್ನಗಳಲ್ಲಿ ಅನ್ವಯಿಸುವ ಸಾಧ್ಯತೆಗಳ ಕುರಿತು ಸಂಶೋಧನೆ ನಡೆಸಿದ್ದರು. ಇದಕ್ಕಾಗಿ ‘Nano-Bio-Zinc formulation for agriculture applications’ ಎಂಬ ಶೀರ್ಷಿಕೆ ಉಳ್ಳ ಪೇಟೆಂಟ್ ಪ್ರಮಾಣ ಪತ್ರವನ್ನು ಏಪ್ರಿಲ್ ‍05ರಂದು ನೀಡಲಾಗಿದೆ.

Kuvempu University ಟ್ಯೊಮಾಟೊ, ಮತ್ತು ಮೆಣಸಿನ ಕಾಯಿ ಬೆಳೆಗಳಿಗೆ ಉತ್ತಮ ಪೌಷ್ಠಿಕಾಂಶದೊಂದಿಗೆ ಅಧಿಕ ಇಳುವರಿ ದೊರಕಿಸಿಕೊಡುವಲ್ಲಿ ಬಯೋ-ಜಿ಼ಂಕ್ ನ ನ್ಯಾನೋ ಅಂಶಗಳು ಪ್ರಮುಖ ಪಾತ್ರ ವಹಿಸಲಿದೆ ಎಂಬ ಅಂಶ ಪ್ರಾಯೋಗಿಕ ಅಧ್ಯಯನದಿಂದ ದೃಢಪಟ್ಟಿದ್ದು, ಈ ಬೆಳೆಗಳನ್ನು ಅವಲಂಬಿಸಿರುವ ಕೃಷಿಕರಿಗೆ ವಾಣಿಜ್ಯಕವಾಗಿ ಹೆಚ್ಚಿನ ಲಾಭ ಗಳಿಸಿಕೊಡಲಿದೆ. ಇದನ್ನು ಗುರುತಿಸಿ ಭಾರತ ಸರ್ಕಾರ ಪೇಟೆಂಟ್ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಪ್ರೊ. ಬಿ. ತಿಪ್ಪೇಸ್ವಾಮಿ ಅವರ ಈ ಸಾಧನೆ ಕೃಷಿ ಅನ್ವಯಿಕತೆಗೆ ಸಹಕಾರಿಯಾಗಲಿರುವುದು ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ವಿಚಾರ. ಬೋಧನೆ, ಮತ್ತು ಸಂಶೋಧನಾ ವಿಚಾರಗಳಿಗೆ ಸಮಂಧಿಸಿದಂತೆ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಿ ಪ್ರಾಧ್ಯಾಪಕರಿಗೆ ಸಂಪೂರ್ಣ ಉತ್ತೇಜನ ನೀಡಲು ಆದ್ಯತೆ ನೀಡಲಾಗುವುದು ಎಂದರು. ಕುಲಸಚಿವ ಎ. ಎಲ್. ಮಂಜುನಾಥ್ ಸಂಶೋಧಕರನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...