Saturday, December 6, 2025
Saturday, December 6, 2025

Madhu Bangarappa ಬಿಜೆಪಿ ಸಂಸದರು10 ವರ್ಷ ಕಳೆದರೂ ಶರಾವತಿ ಸಂತ್ರಸ್ತರಿಗೆ & ಬಗರ್ ಹುಕುಂ ರೈತರಿಗೆ ಹಕ್ಕುಪತ್ರ ಕೊಡಿಸುವಲ್ಲಿ ವಿಫಲ-ಮಧು ಬಂಗಾರಪ್ಪ

Date:

Madhu Bangarappa ಜಿಲ್ಲೆಯ ಅರಣ್ಯ ಭೂಮಿಯಲ್ಲಿ ಸಾಗುವಳಿ ನಡೆಸುತ್ತಿರುವ ರೈತರಿಗೆ ಹಕ್ಕು ಪತ್ರ ಸಿಗಬೇಕಿದ್ದರೆ, ಇಲ್ಲಿನ ಸಂಸದರು ಬದಲಾಗಬೇಕಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಸೊರಬ ತಾಲ್ಲೂಕಿನ ಶಿಗ್ಗಾ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕ ಬಹಿರಂಗ ಸಭೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲೆಯ ಬಿಜೆಪಿ ಸಂಸದರು ಆಯ್ಕೆಗೊಂಡು ೧೦ ವರ್ಷ ಕಳೆದಿದೆ. ಆದರೆ, ಮುಳುಗಡೆ ಸಂತ್ರಸ್ತರು ಹಾಗೂ ಬಗರ್ ಹುಕುಂ ಸಾಗುವಳಿ ರೈತರಿಗೆ ಹಕ್ಕು ಪತ್ರ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಕೇಂದ್ರ ಸರ್ಕಾರದ ಹಂತದಲ್ಲಿ ಬಗೆಹರಿಸಬೇಕಿದ್ದ ಸಮಸ್ಯೆಗಳು ಜಿಲ್ಲೆಗೆ ಕಪ್ಪು ಚುಕ್ಕೆಯಾಗಿ ಉಳಿದುಕೊಂಡಿವೆ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಳ್ಳು ಭಾಷಣ ಮಾಡಿಕೊಂಡು ಜನ ಸಾಮಾನ್ಯರಿಗೆ ನಾಮ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಬಡವರು ಉಸಿರಾಡುತ್ತಿದ್ದಾರೆ. ಇದಕ್ಕೆ ಮಸಿ ಬಳಿಯಲು ಬಿಜೆಪಿಯವರು ಸಂಚು ಹೂಡುತ್ತಿದ್ದಾರೆ. ಇದಕ್ಕೆ ಜನರು ಆಸ್ಪದ ಕೊಡಕೂಡದು ಎಂದರು.
ಕಾoಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆರಳಾಗಿ ನಿಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಯೋಜನೆಗಳಿಗೆ ಶಕ್ತಿ ತುಂಬಿದ್ದಾರೆ ಎಂದರು.
Madhu Bangarappa ಸೊರಬ ತಾಲ್ಲೂಕು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರನ್ನು ದೇವರ ರೀತಿ, ಕಾಣುತ್ತಿದ್ದ ನೆಲ. ಅದೇ ಬಂಗಾರಪ್ಪ ಅವರ ಮಗಳು ನಾನು. ಅವರ ಹಾದಿಯಲ್ಲಿ ಸಾಗಲು ನನಗೂ ಒಂದು ಅವಕಾಶ ಕೊಡಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...