Thursday, March 19, 2026
Thursday, March 19, 2026

K. S. Eshwarappa ಮೋದಿ ಸ್ಪರ್ಧೆ ಬೇಡ ಅಂದರೂ ಸ್ಪರ್ಧಿಸುವುದಾಗಿ ಈಶ್ವರಪ್ಪ ತೀರ್ಮಾನ- ವಿಶ್ವಾಸ್

Date:

K. S. Eshwarappa ಸ್ವತಂತ್ರ‍್ಯ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧಿಸಲಿದ್ದು ಏ.12 ರಂದು ನಾಮಪತ್ರ ಸಲ್ಲಿಸಲಾಗುತ್ತಿದೆ ಎಂದು ಮಾಜಿ ಕಾರ್ಪೊರೇಟರ್ ವಿಶ್ವಾಸ್ ತಿಳಿಸಿದರು.


K. S. Eshwarappa ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಮೋದಿ ಸ್ಪರ್ಧೆ ಬೇಡ ಅಂದರೂ ಸ್ಪರ್ಧಿಸುವುದಾಗಿ ಈಶ್ವರಪ್ಪ ತೀರ್ಮಾನಿಸಿದ ಮೇಲೆ ಮತ್ತೆ ದೆಹಲಿಗೆ ಹೋದಾಗ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲವೆಂದಾಗ ವಾಪಾಸ್ ಆಗಿ ತಮ್ಮ ಸ್ಪರ್ಧೆಯನ್ನು ಈಶ್ವರಪ್ಪನವರು ಗಟ್ಟಿ ಮಾಡಿದರು ಎಂದರು.
ಏ.12 ರಂದು10 ಗಂಟೆಯಿoದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಆರಂಭಿಸಿ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸಮಾಜದ ಮುಖಂಡರು,ಈ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ವೇದಿಕೆಗೆ ಅವಕಾಶವಿಲ್ಲದ ಕಾರಣ, ವಾಹನದಲ್ಲಿ ಸ್ಪೀಕರ್ ಬಳಸಿ ಈಶ್ವರಪ್ಪ ಭಾಷಣ ಮಾಡಲಿದ್ದಾರೆ. ನಂತರ ನಾಮಪತ್ರ ಸಲ್ಲಿಸಲಾಗುವುದು. ಪಕ್ಷ ಶುದ್ಧೀಕರಣದ ಮಾತನಾಡಿರುವ ಈಶ್ವರಪ್ಪ ಅವರನ್ನು ಈ ಬಾರಿ ಚುನಾವಣೆಯಲ್ಲಿ2ಲಕ್ಷ ಮತಗಳಿಂದ ಗೆಲ್ಲಿಸಲಾಗುವುದು ಎಂದರು.
ಕರಪತ್ರದಲ್ಲಿಯೂ ಮೋದಿಯವರ ಫೋಟೊ ಬಳಸಿಕೊಳ್ಳುವ ಬಗ್ಗೆ ಚಿಂತಿಸಲಾಗುವುದು. ಮನವೊಲಿಸುವ ಭರವಸೆ ಹಿನ್ನೆಲೆಯಲ್ಲಿ ದೆಹಲಿಗೆ ಹೊದರೂ ಅಮಿತ್ ಶಾ ದೆಹಲಿಗೆ ಹೋದಾಗ ಭೇಟಿಯಾಗದೆ ಅವಮಾನಿಸಿದರು ಎಂದ ಅವರು, ಮೋದಿ ಪೋಟೊ ಬಳಕೆ ವಿಚಾರವಾಗಿ ನ್ಯಾಯಾಲಯದಲ್ಲಿ ಕೆವಿಟ್ ಹಾಕಲಾಗಿದೆ. ನ್ಯಾಯಾಲಯ ಏನು ಸೂಚಿಸಲಿದೆ ಎನ್ನುವುದರ ಮೇಲೆ ಮುಂದೆ ತೀರ್ಮಾನಿಸಲಾಗುವುದು. ನಾಮಪತ್ರ ಸಲ್ಲಿಕೆಯ ನಂತರದ ವಿಚಾರ ಅದು ಮೋದಿ ಫೋಟೊ ಬಳಸಬಾರದು ಎಂದರು ಮನಸ್ಸಿನಿಂದ ತೆಗೆಯಲು ಸಾಧ್ಯವಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...