Sunday, December 7, 2025
Sunday, December 7, 2025

Actor Ramya ಮಂಡ್ಯ ಕ್ಷೇತ್ರ ಪ್ರಚಾರಕ್ಕೆ ಸ್ಟಾರ್ ರಮ್ಯಾ ಎಂಟ್ರಿ, ಕಾಂಗ್ರೆಸ್ ಮಾಸ್ಟರ್ ಪ್ಲಾನ್

Date:

Actor Ramya ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಸಂಸದೆ ಸುಮಲತಾ ಬೆಂಬಲ ಸೂಚಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಇದರಂತೆ ಸಂಸದರಾಗಿದ್ದ 6 ತಿಂಗಳಲ್ಲೇ ಜನಮನ ಗೆದ್ದಿದ್ದ ರಮ್ಯಾ ಅವರನ್ನು ಪ್ರಚಾರಕ್ಕೆ ಕರೆಸಿ ಮತದಾರರನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ರಮ್ಯಾ ಜೊತೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಈಗಾಗಲೇ ಮಾತುಕತೆ ನಡೆಸಿದ್ದು, ಮಂಡ್ಯ ಕ್ಷೇತ್ರದ ಕ್ಯಾಂಪೇನ್‍ಗೆ ಬರಲು ಅವರು ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ವಾರ ಅಭ್ಯರ್ಥಿ ಜೊತೆ ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Actor Ramya ಒಕ್ಕಲಿಗರ ಭದ್ರಕೋಟೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹ ಎಂಟ್ರಿ ಕೊಡಲಿದ್ದಾರೆ.
ಏಪ್ರಿಲ್ 17 ಅಥವಾ 20 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹೆಚ್‍ಡಿಕೆ ವಿರುದ್ಧ ತಂತ್ರ ಹೆಣೆದು ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಇದರ ನಡುವೆ ಸಿಎಂ ಸಿದ್ದರಾಮಯ್ಯರಿಂದ ಒಂದು ದಿನ, ಮಂಡ್ಯ ಲೋಕಾಸಭಾ ಕ್ಷೇತ್ರದ ಕೆ.ಆರ್ ನಗರ, ಕೆ.ಆರ್ ಪೇಟೆಯಲ್ಲಿ ಮತಯಾಚನೆ ನಡೆಯಲಿದೆ. ಇನ್ನೊಂದು ದಿನ ಡಿಸಿಎಂ ಡಿ.ಕೆ ಶಿವಕುಮಾರ್ ಮಂಡ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಮಂಡ್ಯವನ್ನ ಸಾಕಷ್ಟು ಪ್ರತಿಷ್ಠೆಯ ಕ್ಷೇತ್ರವಾಗಿ ಕಾಂಗ್ರೆಸ್ ತೆಗೆದುಕೊಂಡಿದೆ.

ಮತ್ತೊಂದೆಡೆ ಮೈತ್ರಿ ಬಲ ಹೆಚ್ಚಿಸಿರುವ ಸಂಸದೆ ಸುಮಲತಾ, ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಪ್ರಚಾರಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ಸ್ಥಳೀಯ ನಾಯಕರೊಂದಿಗೆ ಪ್ರಚಾರ ನಡೆಸಲು ಮಾತುಕತೆ ನಡೆದಿದ್ದು, ಈ ಮೂಲಕ ಸುಮಲತಾ ಬೆಂಬಲಿಗರು ಹಾಗೂ ಮಹಿಳಾ ಮತದಾರರನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...