News Week
Magazine PRO

Company

Saturday, May 3, 2025

Klive Special Article ಪ್ರಜಾಪ್ರಭುತ್ವ ಎಂದರೆ ಮನುಷ್ಯರಿಗೆ ಘನತೆ, ಗೌರವ ನೀಡುವ ಕ್ರಮ”-ಡಾ॥ ಬಿ.ಆರ್.ಅಂಬೇಡ್ಕರ್

Date:

Klive Special Article ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನ, ಇವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯುತ್ತಾರೆ. ಡಾ ಬಿ. ಆರ್ ಅಂಬೇಡ್ಕರ್ ರವರು 14 ನೇ ಏಪ್ರಿಲ್ 1891 ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ ನಲ್ಲಿ ಹುಟ್ಟಿದರು. ಅಂಬೇಡ್ಕರ್ ರವರು ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು. ಇವರು ಮಹಾರ‍ ಜಾತಿಯಲ್ಲಿ ಹುಟ್ಟಿದರು. ಈ ಜಾತಿಯವರು ಹೆಚ್ಚಿನ ಜನ ಬ್ರಿಟಿಷ್ ಸರ್ಕಾರದ ಮಿಲಿಟರಿ ಸೇವೆಯಲ್ಲಿ ಉದ್ಯೋಗಕ್ಕಾಗಿ ಸೇರುತ್ತಿದ್ದರು. ಇವರ ಅಜ್ಜ ಮಾಲೋಜಿ ಸಕ್ಪಾಲ್ ಅವರು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬಾಂಬೆ ಸೇನೆಯಲ್ಲಿ ಸೇರಿ, ಹವಾಲ್ದಾರರಾಗಿ ನಿವೃತ್ತಿ ಹೊಂದಿದ್ದರು. ಇವರು ಆ ಕಾಲಕ್ಕೆ 19 ಮೆಡಲ್ ಗಳನ್ನು ಗಳಿಸಿದ್ದರು. ಇವರಿಗೆ ಇಬ್ಬರು ಮಕ್ಕಳು ರಾಮಜಿ ಸಕ್ಪಾಲ್, ಮೀರಾ ಸಕ್ಪಾಲ್. ರಾಮಜಿ ಸಕ್ಪಾಲ್ ಅವರ ಹೆಂಡತಿ ಭೀಮಬಾಯಿ. ರಾಮಜಿ ಮತ್ತು ಭೀಮಬಾಯಿ ರವರು ಇಬ್ಬರು ಕಷ್ಟ ಸಹಿಷ್ಣುಗಳಾದ ಸತಿಪತಿಗಳಾಗಿದ್ದರು. ಇವರಿಗೆ 14 ಮಕ್ಕಳು ಹುಟ್ಟಿದರು. ಈ 14ನೇ ಮಗುವೇ ಅಂಬೇಡ್ಕರ್. ಅಂಬೇಡ್ಕರ್ ಅವರ ಮೊದಲ ಹೆಸರು ಭೀಮರಾವ್ ಆಗಿತ್ತು. ಡಾ.ಅಂಬೇಡ್ಕರರು ನಾನು ನನ್ನ ತಂದೆ ತಾಯಿಯರಿಗೆ 14 ನೇ ರತ್ನನಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು. ಶಾಲೆಗೆ ಸೇರುವ ಸಂಧರ್ಭದಲ್ಲಿಯೇ ಇವರಿಗೆ ಅಸ್ಪೃಶ್ಯತೆಯ ಅನುಭವವಾಗುತ್ತದೆ. ಆದರೂ ಎಲ್ಲವನ್ನು ಮೆಟ್ಟಿನಿಂತು, ಅವಮಾನಗಳನ್ನು ಎದುರಿಸುತ್ತಾ ಶಿಕ್ಷಣವನ್ನು ಪಡೆಯುವದನ್ನು ಮುಂದುವರೆಸುತ್ತಾರೆ. ಹೀಗೆ ಅತೀ ಹೆಚ್ಚು ಓದಿದ ವಿಶ್ವದ ಮಹಾನಾಯಕ ಎಂಬ ಕೀರ್ತಿಯನ್ನೂ ಸಹ ಇವರು ಪಡೆದುಕೊಳ್ಳುತ್ತಾರೆ.

Klive Special Article ತಂತ್ರ ನಂತರ:- 1947 ರಲ್ಲಿ ಕಾನೂನು ಮಂತ್ರಿಯಾಗಿ ಪಂಡಿತ ಜವಹಾರಲಾಲ್ ನೆಹರೂ ಮಂತ್ರಿ ಮಂಡಲದಲ್ಲಿ ಇವರು ಪ್ರಧಾನಮಂತ್ರಿಗೆ ಆತ್ಮೀಯರಾಗುತ್ತಾರೆ. ನೆಹರೂ ಕಲ್ಪಿಸಿದ ಸಮಾಜವಾದಿ ಪ್ರಜಾಸತ್ತಾತ್ಮಕ ರಾಜ್ಯವ್ಯವಸ್ಥೆ ಡಾ.ಅಂಬೇಡ್ಕರ್ ರವರಿಂದಲೇ ಪ್ರಭಾವಿತರಾಗಿದ್ದರು. ನೆಹರೂರವರು ಹಾಕಿಕೊಂಡ ಪಂಚ ವಾರ್ಷಿಕ ಯೋಜನೆಗೆ ಅಂಬೇಡ್ಕರರವರು ಮಾರ್ಗದರ್ಶಿಗಳಾಗಿದ್ದರು. ಮತ್ತು ಭಾಕ್ರಾನಂಗಲ್ ಅಣೆಕಟ್ಟು ಕಟ್ಟಲು ಸಲಹೆ ನೀಡಿದವರೆ ಅಂಬೇಡ್ಕರರವರು. ಇವರು ಭಾರತದ ನೀರಾವರಿ ಯೋಜನೆಯ ಜನಕನಾಗಿದ್ದು, ಉತ್ತರ ಭಾರತ ಮತ್ತು ದಕ್ಷಿಣ ಭಾರತ ನದಿಗಳ ಜೋಡಣೆಗೆ 1952 ರಲ್ಲಿಯೇ ಸಲಹೆ ನೀಡಿದರು. ನೆಹರೂರವರು ವಿದೇಶಿ ಗಣ್ಯರಿಗೆ ಇವರನ್ನು ಪರಿಚಯಿಸುವಾಗ “ಇವರು ಡಾ ಅಂಬೇಡ್ಕರ್, ನನ್ನ ಮಂತ್ರಿ ಮಂಡಲದ ವಜ್ರವಾಗಿದ್ದಾರೆ” ಎಂದು ಪರಿಚಯಿಸುತ್ತಿದ್ದರು.

● ಮಹಿಳಾ ಹಿಂದೂ ಕೋಡ್-ಬಿಲ್:- ಪಾರ್ಲಿಮೆಂಟನ ಸಭೆಯಲ್ಲಿ ಮಹಿಳೆಗೆ ಹಿಂದೂ ಕೋಡ್-ಬಿಲ್ ನಲ್ಲಿ ಕೇಳಲಾದ ಹಕ್ಕುಗಳನ್ನು ನಿರಾಕರಿಸಿತು. ಹಿಂದೂ ಕೋಡ್-ಬಿಲ್ ನಲ್ಲಿ ಪ್ರಮುಖ ನಾಲ್ಕು ಅಂಶಗಳು ಇದ್ದವು 1) ಮಹಿಳೆಯು ಕೂಡ ತನ್ನ ಪತಿಯನ್ನು ಆಯ್ಕೆಮಾಡುವ ಹಕ್ಕು. 2) ಪುರುಷರ ಹಾಗೆ ವಿಚ್ಚೇಧಿಸುವ ಹಕ್ಕು. 3) ತಂದೆಯ ಆಸ್ತಿಯಲ್ಲಿ ಗಂಡುಮಕ್ಕಳ ಸಮನಾಗಿ ಹೆಣ್ಣುಮಗಳಿಗೂ ಆಸ್ತಿ ಹಕ್ಕು. 4)ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮಕ್ಕಳ ಜೊತೆಯಲ್ಲಿ ಹೆಣ್ಣುಮಕ್ಕಳಿಗೂ ಮತ್ತು ವಿಧವೆ ಸೊಸೆಗೂ ಸಮ ಪಾಲು ಹಕ್ಕು. ಕೊನೆಗೆ ಹಿಂದೂ ಕೋಡ್ ಬಿಲ್ ಪಾಸಾಗದ ಕಾರಣ ಅಂಬೇಡ್ಕರರವರು ಕಾನೂನು ಮ್ಯಾಟ್ರಿ ಪದವಿಗೆ ರಾಜೀನಾಮೆ ನೀಡಿದರು.

● ಬೌದ್ಧ ಧರ್ಮ ಸ್ವೀಕಾರ:- 1951 ರಲ್ಲಿ ಜಾಗತಿಕ ಬೌದ್ಧ ಸಮ್ಮೇಳನ ರಂಗುನದಲ್ಲಿ ನಡೆಯಿತು ಅದರಲ್ಲಿ ಭಾಗವಹಿಸಿದರು. 1954ರಲ್ಲಿ ಕಟ್ಮೊಂಡಾದಲ್ಲಿ ನಡೆದ ಜಾಗತಿಕ ಬೌದ್ಧ ಸಮ್ಮೇಳನದಲ್ಲಿ ಭಾಗವಹಿಸಿದರು. 1951ರಲ್ಲಿ ಭಾರತೀಯ ಬೌದ್ಧ ಸಂಘಟನೆಯಲ್ಲಿ ಬುದ್ಧ ಮತ್ತು ಮಾರ್ಕ್ಸ್ ಕುರಿತು ಪ್ರಬಂಧ ಮಂಡಿಸಿದರು. 1955ರಲ್ಲಿ ಭಾರತೀಯ ಬೌದ್ಧ ಮಹಾಸಭೆ ಸ್ಥಾಪಿಸಿದರು. ಬದುಕಿನ ಕೊನೆಯ ದಿನಗಳಲ್ಲಿ ಡಾ.ಅಂಬೇಡ್ಕರರು ಬೌದ್ಧ ಧರ್ಮ ಸ್ವೀಕಾರದ ನಿರ್ಧಾರಮಾಡಿ ಅಕ್ಟೊಬರ್ 14 1956 ರಲ್ಲಿ ತನ್ನ 5 ಲಕ್ಷ ಅನುಯಾಯಿಗಳೊಂದಿಗೆ ಪತ್ನಿ ಸವಿತಾ ಅಂಬೇಡ್ಕರ್ ಜೊತೆಗೆ ನಾಗ ಜನತೆಯ ಮೂಲ ನಾಡಾದ ನಾಗಪುರದಲ್ಲಿ ಬೌದ್ಧ ಧರ್ಮ ಸ್ವೀಕಾರಮಾಡಿದರು. ಇವರಿಗೆ ಬರ್ಮಾದ ಬೌದ್ಧ ಬಂತೆ, ವೀರ ಚಂದ್ರಮಣಿ ಬೌದ್ಧಧೀಕ್ಷೆ ನೀಡಿದರು. ಮುಂದೆ ಡಿಸೆಂಬರ್ 6 1956 ರಲ್ಲಿ ದೆಹಲಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಡಿಸೆಂಬರ್ 7 ಕ್ಕೆ ಮುಂಬಯಿಯ ದಾದರಿನಲ್ಲಿ ಬೌದ್ಧ ಧರ್ಮದ ನಿಯಮದ ಪ್ರಕಾರ ಮಹಾಪರಿನಿರ್ವಾಣದ ವಿಧಿಯನ್ನು ಅಂತ್ಯಕ್ರಿಯೆಯಲ್ಲಿ ಮಾಡಲಾಯಿತು.

● ಗೌರವಗಳು:- 1950 ರಲ್ಲಿ ಅಮೆರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯ ಭಾರತ ಸಂವಿಧಾನ ರಚಿಸಿದ್ದಕ್ಕಾಗಿ ಇವರನ್ನು ಸಂವಿಧಾನ ಶಿಲ್ಪಿ , ಆಧುನಿಕ ಭಾರತದ ನಿರ್ಮಾಪಕ, ಸಮಾಜದ ಪ್ರವರ್ತಕ, ಎಂದು ಪರಿಗಣಿಸಿ “ಡಾಕ್ಟರ್ ಆಫ್ ಲಾ” ಪದವಿ ನೀಡಿತು, 1953ರಲ್ಲಿ ಆಂಧ್ರಪ್ರದೇಹದ ಉಸ್ಮಾನಿಯ ವಿಶ್ವವಿದ್ಯಾಲಯ ಸಂವಿಧಾನದ ಸೇವೆಯನ್ನು ಪರಿಗಣಿಸಿ “ಡಾಕ್ಟರ್ ಆಫ್ ಲಿಟರೇಚರ” ಎಂಬ ಗೌರವ ಪದವಿಯನ್ನು ನೀಡಿತು. 1951ರಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು ಸಕ್ರಿಯ ರಾಜಕೀಯದಿಂದ ದೂರ ಉಳಿದರು.

ಡಾ.ಬಿ.ಆರ್ ಅಂಬೇಡ್ಕರವರ ನುಡಿಮುತ್ತುಗಳು:-

1) ಪ್ರಜಾಪ್ರಭುತ್ವ ಎಂದರೆ ಕೇವಲ ಆಡಳಿತದ ವಿಧಾನವಲ್ಲ. ಅದೊಂದು ಜೊತೆಯಾಗಿ ಬಾಳುವ ವಿಧಾನ, ಸಮಗ್ರ ಬದುಕಿನ ಅನುಭವ. ಜೊತೆಯಲ್ಲಿರುವ ಮನುಷ್ಯರಿಗೆ ಘನತೆ, ಗೌರವ ನೀಡುವ ಕ್ರಮ.

2) ಇತಿಹಾಸವನ್ನು ಮರೆಯುವವರು ಇತಿಹಾಸವನ್ನು ಸೃಷ್ಟಿಸಲಾರರು.

3) ವ್ಯಕ್ತಿಯ ಜೀವನ ಸುದೀರ್ಘವಾಗಿರಬೇಕಿಲ್ಲ. ಆದರೆ ಅತ್ಯುತ್ತಮವಾಗಿರಬೇಕು.

4) ಸ್ವಾತಂತ್ರ್ಯ, ಸಮಾನತೆ ಹಾಗೂ ಸಾಹೋದರ್ಯವನ್ನು ಪ್ರತಿಪದಿಸುವ ಧರ್ಮವನ್ನು ನಾನು ಇಷ್ಟಪಡುತ್ತೇನೆ.

5) ಮನಸ್ಸಿನ ಸಂಸ್ಕೃತಿಯ ಉನ್ನತಿಯೇ ಮಾನವನ ಅಸ್ತಿತ್ವದ ಪರಮ ಗುರಿಯಾಗಿರಬೇಕು.

6) ಅಸ್ಪೃಶ್ಯತೆಯು ಮನುಷ್ಯರನ್ನು ಬಾಧಿಸಬಹುದಾದ ಅತೀ ಕೆಟ್ಟ ಕಾಯಿಲೆ.

7) ಧರ್ಮ ಹಾಗೂ ಜೀತಗಳು ಜೊತೆಯಾಗಿ ಇರಲಾರವು.

● ಪ್ರಜಾಪ್ರಭುತ್ವದ ಕಲ್ಪನೆ:- ಡಾ.ಬಿ.ಆರ್.ಅಂಬೇಡ್ಕರ ಅವರ ಪ್ರಜಾಪ್ರಭುತ್ವದ ಕಲ್ಪನೆ ಹೇಗಿತ್ತು ಮತ್ತು ಅದರಿಂದ ಅವರು ಏನನ್ನು ನಿರೀಕ್ಷಿಸಿದ್ದರು ಅನ್ನುವುದರ ಬಗ್ಗೆ ಈ ಉಲ್ಲೇಖವು ಬಹಳಷ್ಟು ತಿಳಿಸುತ್ತದೆ. ಕ್ರಾಂತಿಕಾರಕ ಬದಲಾವಣೆಗಳನ್ನು ಕೇವಲ ಕ್ರಾಂತಿಯ ಮೂಲಕವೇ ತರಬಲ್ಲೆವು ಮತ್ತು ಕ್ರಾಂತಿ ಎಂದರೆ ರಕ್ತಪಾತ ಅನ್ನುವುದು ಸಾಮಾನ್ಯ ತಿಳಿವಳಿಕೆ. ಅಲ್ಲದೆ ಕ್ರಾಂತಿಗಳು ಮತ್ತು ಪ್ರಜಾಪ್ರಭುತ್ವಗಳು ಪರಸ್ಪರ ಹೊಂದಣಿಕೆಯಾಗಲಾರವು ಎಂಬ ಗುಪ್ತ ಗುಮಾನಿಯೊ ಇದೆ. ಕ್ರಾಂತಿಯ ಬಗ್ಗೆಯ ಈ ಸಾಮಾನ್ಯ ಭಾವನೆಗಳು ತಾತ್ವಿಕವಾಗಿ ತಪ್ಪು ಎಂದು ಎತ್ತಿ ತೋರಿಸಬಹುದು. ಆ ವಿಷಯ ಬೇರೆ ಹಾಗೆಯೇ, ಪ್ರಜಾಪ್ರಭುತ್ವದ ಬಗ್ಗೆಯೂ ಕೆಲವು ಸಾಮಾನ್ಯ ಭಾವನೆಗಳಿವೆ. ಕ್ರಮಬದ್ದ ಚುನಾವಣೆಗಳು, ಅನೇಕ ರಾಜಕೀಯ ಪಕ್ಷಗಳು ಮತ್ತು ಪ್ರತಿ ವ್ಯಕ್ತಿಗೂ ಸಮಾನ ರಾಜಕೀಯ ಮೌಲ್ಯವನ್ನು ನೀಡುವ ಒಂದು ಪ್ರಾತಿನಿಧಿಕ ಸರ್ಕಾರದ ರೂಪ ಅದು ಎಂದು ಪರಿಗಣಿಸಲ್ಪಟ್ಟಿದೆ. ಪ್ರಜಾಪ್ರಭುತ್ವದ ಎದ್ದು ಕಾಣುವ ಸ್ಥೂಲ ಸಂರಚನೆಯ ಮುಖ್ಯ ಶಿಲ್ಪಿ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಪರಿಗಣಿಸಲ್ಪಟ್ಟಿದ್ದರು. ಅಂಬೇಡ್ಕರ ಅವರ ಪ್ರಜಾಪ್ರಭುತ್ವದ ಕಲ್ಪನೆ ತೀರ ವಿಭಿನ್ನ ಸಮಾಜವನ್ನು ಆದರ್ಶ ಸಮಾಜವನ್ನಾಗಿ ತಮ್ಮ ಕಲ್ಪನೆಯ ಸುಖಿರಾಜ್ಯ ವನ್ನಾಗಿ ಬದಲಾಯಿಸಿ, ಸ್ವಾತಂತ್ರ್ಯ, ಸಮಾನತೆ ಮತ್ತು ಭಾತೃತ್ವಗಳನ್ನು ಒಟ್ಟಿಗೆ ಸಾಧಿಸಬಲ್ಲದೆಂಬಂತೆ ಪ್ರಜಾಪ್ರಭುತ್ವವನ್ನು ಅವರು ಕಲ್ಪಿಸಿಕೊಂಡ್ಡಿದರು.
ಪ್ರಜಾಪ್ರಭುತ್ವವೆಂದರೆ ಸರ್ಕಾರದ ಒಂದು ರೂಪವೆಂದು ಅದು ಹುಟ್ಟಿದ ಪ್ರಾಚೀನತೆಯಿಂದ ಇಂದಿನ ಆಧುನಿಕತೆಯವರೆಗೂ ಕಲ್ಪಿಸಿಕೊಳ್ಳಲಾಗಿದೆ. ಆದರೆ ಪ್ರಜಾಪ್ರಭುತ್ವವು ಕೇವಲ ಸರ್ಕಾರದ ಒಂದು ರೂಪವಲ್ಲ. ಅದು ಪ್ರಮುಖವಾಗಿ ಸಹಬಾಳ್ವೆಯ ಸೊಗಸು ಮತ್ತು ಅನುಭವವನ್ನು ಪರಸ್ಪರ ದಟೈಸುವ ಒಂದು ಜೋಡಣಿ. ಮೂಲಭೂತವಾಗಿ ಅದು ಸಹವರ್ತಿಗಳೆಡೆಗೆ ತೋರುವ ಗೌರವಾದರ ಭಾವನೆ ಎಂದು ಹೇಳಿದ್ದಾರೆ. ಅವರ ದೃಷ್ಟಿಯಲ್ಲಿ ಪ್ರಜಾಪ್ರಭುತ್ವ ಪ್ರಜಾಸತ್ತಾತ್ಮಕ ಸಮಾಜವನ್ನು ನಿರೀಕ್ಷಿಸುತ್ತದೆ. ರಾಜಕಾರಣಿಗಳು ಪ್ರಜಾಪ್ರಭುತ್ವವು ಮೂಲಭೂತವಾಗಿ ಸಮಾಜದ ಒಂದು ಸ್ವರೂಪ ಕೇವಲ ಸರ್ಕಾರದ ಮಾದರಿ ಅಲ್ಲ ಅನ್ನುವುದನ್ನು ಗ್ರಹಿಸಲಿಲ್ಲ. ಇದು ಎರಡು ಅಂಶಗಳನ್ನು ಒಳಗೊಂಡಿದೆ. ಮೊದಲನೆಯದು ಒಂದು ಮನೋಭಾವ, ಸಹವರ್ತಿಗಳಿಗೆ ಗೌರವ ಮತ್ತು ಸಮಾನತೆ. ಎರಡನೆಯದು ಪೆಡಸಾದ ಸಾಮಾಜಿಕ ಅಡೆ-ತಡೆಗಳಿಂದ ಮುಕ್ತ ಸಮಾಜ.ಸಾಮಾಜಿಕ ಪ್ರಜಾಪ್ರಭುತ್ವ ಅನ್ನುವ ಪದ ಸಾಮಾನ್ಯವಾಗಿ ಆರ್ಥಿಕ ಸಂಸ್ಧೆಗಳು ಹಾಗೂ ಬಂಡವಾಳ ಕ್ರಮೇಣ ಸಮಾಜವಾದಕ್ಕೆ ಹೊರಳುತ್ತದೆಂಬ ಫೇಬಿಯನ್ ನಂಬಿಕೆ ಗಳನ್ನು ಒಳಗೊಂಡಿರುತ್ತದೆ. ಆದರೆ ಅಂಬೇಡ್ಕರ ಅವರ ಪ್ರ್ರಕಾರ ಅದು ಶ್ರೇಣೀಕೃತವಲ್ಲದ, ವಿಂಗಡಣೆ ಮತ್ತು ಪ್ರತ್ಯೇಕಗಳಿಲ್ಲದ ಸಮಾಜ. ಅದು ಭಾರತಿಯ ಸಮಾಜ ಮತ್ತು ಅದರ ಜಾತಿಗಳ ವ್ಯವಸ್ಥೆಗೆ ತೀಕ್ಷ್ಣವಾಗಿ ಅನ್ವಯಿಸುತ್ತದೆ. ಹೀಗೆ ಜಗತ್ತಿನ ಅತೀ ದೊಡ್ಡ ಸಂವಿಧಾನ ರಚಿಸಿ ಭಾರತವನ್ನು ಪ್ರಜ್ವಲಿಸುವಂತೆ ಮಾಡಿದ ಇವರಿಗೆ ಕೋಟಿ ಕೋಟಿ ನಮನ.

ಬರಹ : ಎನ್.ಎನ್.ಕಬ್ಬೂರ, ಶಿಕ್ಷಕರು, ಬೆಳಗಾವಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News
  • United States+1
  • United Kingdom+44
  • Afghanistan+93
  • Albania+355
  • Algeria+213
  • American Samoa+1
  • Andorra+376
  • Angola+244
  • Anguilla+1
  • Antigua & Barbuda+1
  • Argentina+54
  • Armenia+374
  • Aruba+297
  • Ascension Island+247
  • Australia+61
  • Austria+43
  • Azerbaijan+994
  • Bahamas+1
  • Bahrain+973
  • Bangladesh+880
  • Barbados+1
  • Belarus+375
  • Belgium+32
  • Belize+501
  • Benin+229
  • Bermuda+1
  • Bhutan+975
  • Bolivia+591
  • Bosnia & Herzegovina+387
  • Botswana+267
  • Brazil+55
  • British Indian Ocean Territory+246
  • British Virgin Islands+1
  • Brunei+673
  • Bulgaria+359
  • Burkina Faso+226
  • Burundi+257
  • Cambodia+855
  • Cameroon+237
  • Canada+1
  • Cape Verde+238
  • Caribbean Netherlands+599
  • Cayman Islands+1
  • Central African Republic+236
  • Chad+235
  • Chile+56
  • China+86
  • Christmas Island+61
  • Cocos (Keeling) Islands+61
  • Colombia+57
  • Comoros+269
  • Congo - Brazzaville+242
  • Congo - Kinshasa+243
  • Cook Islands+682
  • Costa Rica+506
  • Croatia+385
  • Cuba+53
  • Curaçao+599
  • Cyprus+357
  • Czech Republic+420
  • Côte d’Ivoire+225
  • Denmark+45
  • Djibouti+253
  • Dominica+1
  • Dominican Republic+1
  • Ecuador+593
  • Egypt+20
  • El Salvador+503
  • Equatorial Guinea+240
  • Eritrea+291
  • Estonia+372
  • Eswatini+268
  • Ethiopia+251
  • Falkland Islands+500
  • Faroe Islands+298
  • Fiji+679
  • Finland+358
  • France+33
  • French Guiana+594
  • French Polynesia+689
  • Gabon+241
  • Gambia+220
  • Georgia+995
  • Germany+49
  • Ghana+233
  • Gibraltar+350
  • Greece+30
  • Greenland+299
  • Grenada+1
  • Guadeloupe+590
  • Guam+1
  • Guatemala+502
  • Guernsey+44
  • Guinea+224
  • Guinea-Bissau+245
  • Guyana+592
  • Haiti+509
  • Honduras+504
  • Hong Kong+852
  • Hungary+36
  • Iceland+354
  • India+91
  • Indonesia+62
  • Iran+98
  • Iraq+964
  • Ireland+353
  • Isle of Man+44
  • Israel+972
  • Italy+39
  • Jamaica+1
  • Japan+81
  • Jersey+44
  • Jordan+962
  • Kazakhstan+7
  • Kenya+254
  • Kiribati+686
  • Kosovo+383
  • Kuwait+965
  • Kyrgyzstan+996
  • Laos+856
  • Latvia+371
  • Lebanon+961
  • Lesotho+266
  • Liberia+231
  • Libya+218
  • Liechtenstein+423
  • Lithuania+370
  • Luxembourg+352
  • Macau+853
  • Madagascar+261
  • Malawi+265
  • Malaysia+60
  • Maldives+960
  • Mali+223
  • Malta+356
  • Marshall Islands+692
  • Martinique+596
  • Mauritania+222
  • Mauritius+230
  • Mayotte+262
  • Mexico+52
  • Micronesia+691
  • Moldova+373
  • Monaco+377
  • Mongolia+976
  • Montenegro+382
  • Montserrat+1
  • Morocco+212
  • Mozambique+258
  • Myanmar (Burma)+95
  • Namibia+264
  • Nauru+674
  • Nepal+977
  • Netherlands+31
  • New Caledonia+687
  • New Zealand+64
  • Nicaragua+505
  • Niger+227
  • Nigeria+234
  • Niue+683
  • Norfolk Island+672
  • North Korea+850
  • North Macedonia+389
  • Northern Mariana Islands+1
  • Norway+47
  • Oman+968
  • Pakistan+92
  • Palau+680
  • Palestine+970
  • Panama+507
  • Papua New Guinea+675
  • Paraguay+595
  • Peru+51
  • Philippines+63
  • Poland+48
  • Portugal+351
  • Puerto Rico+1
  • Qatar+974
  • Romania+40
  • Russia+7
  • Rwanda+250
  • Réunion+262
  • Samoa+685
  • San Marino+378
  • Saudi Arabia+966
  • Senegal+221
  • Serbia+381
  • Seychelles+248
  • Sierra Leone+232
  • Singapore+65
  • Sint Maarten+1
  • Slovakia+421
  • Slovenia+386
  • Solomon Islands+677
  • Somalia+252
  • South Africa+27
  • South Korea+82
  • South Sudan+211
  • Spain+34
  • Sri Lanka+94
  • St Barthélemy+590
  • St Helena+290
  • St Kitts & Nevis+1
  • St Lucia+1
  • St Martin+590
  • St Pierre & Miquelon+508
  • St Vincent & Grenadines+1
  • Sudan+249
  • Suriname+597
  • Svalbard & Jan Mayen+47
  • Sweden+46
  • Switzerland+41
  • Syria+963
  • São Tomé & Príncipe+239
  • Taiwan+886
  • Tajikistan+992
  • Tanzania+255
  • Thailand+66
  • Timor-Leste+670
  • Togo+228
  • Tokelau+690
  • Tonga+676
  • Trinidad & Tobago+1
  • Tunisia+216
  • Turkey+90
  • Turkmenistan+993
  • Turks & Caicos Islands+1
  • Tuvalu+688
  • US Virgin Islands+1
  • Uganda+256
  • Ukraine+380
  • United Arab Emirates+971
  • United Kingdom+44
  • United States+1
  • Uruguay+598
  • Uzbekistan+998
  • Vanuatu+678
  • Vatican City+39
  • Venezuela+58
  • Vietnam+84
  • Wallis & Futuna+681
  • Western Sahara+212
  • Yemen+967
  • Zambia+260
  • Zimbabwe+263
  • Åland Islands+358

Popular

More like this
Related

Karunada Yuvashakti Organization ಕರುನಾಡು ಯುವಶಕ್ತಿಯ ಜಿಲ್ಲಾಧ್ಯಕ್ಷರ ಮನವಿ

Karunada Yuvashakti Organization ಕೆಲವು ರಾಜಕಾರಣಿಗಳು ದೇಶ ಮೊದಲು ಎಂಬುದನ್ನು...

ರಸ್ತೆಯ ಮೇಲೆ ಕಾಳು ಒಕ್ಕಣೆ, ಅಪಘಾತಕ್ಕೆ ಕಾರಣ, ರೈತರಿಗೆ ಎಚ್ಚರವಹಿಸಲು ಮಾಹಿತಿ

ಸೊರಬ ತಾಲೂಕಿನ ಉದ್ರಿ ಗ್ರಾಮದ ತೋಗರ್ಸಿ ಮಾರ್ಗದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ...

Radio Shivamogga ರೇಡಿಯೊ ಆಲಿಸುವ ಸಂತೋಷ ಬೇರೆಲ್ಲೂ ಸಿಗದು- ಬಿ.ಗೋಪಿನಾಥ್

Radio Shivamogga ತಕ್ಷಣಕ್ಕೆ ಸುದ್ದಿಯನ್ನು ಪ್ರಸಾರ ಮಾಡುವ ಏಕೈಕ ಮಾಧ್ಯಮ...

Labor Day ಗಿಗ್ ಕಾರ್ಮಿಕರೊಂದಿಗೆ ವಿಶಿಷ್ಟವಾಗಿ ಯುವ ಕಾಂಗ್ರೆಸ್ ನಿಂದ ಕಾರ್ಮಿಕ ದಿನಾಚರಣೆ

Labor Day ಕಾರ್ಮಿಕ ದಿನಾಚರಣೆ ಅಂಗವಾಗಿ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ...