Friday, March 20, 2026
Friday, March 20, 2026

RSS ಆರ್ ಎಸ್ಎಸ್ ಕಟ್ಟಾಳು ಜಗಳೂರು ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆ

Date:

RSS ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೇ ದೊಡ್ಡದಿತ್ತು. ಈ ಮಧ್ಯೆ ಸಂಸದ ಸಿದ್ದೇಶ್ವರ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದರಿಂದ ಬೇಸರಗೊಂಡಿರುವ ದಾವಣಗೆರೆ ಜಗಳೂರು ಕ್ಷೇತ್ರದ ಮಾಜಿ ಶಾಸಕ, ಆರ್​ಎಸ್​​ಎಸ್ ಕಟ್ಟಾಳು ಟಿ ಗುರುಸಿದ್ದನಗೌಡ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.
ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ಅವರು, ಮಾಜಿ ಶಾಸಕ ಟಿ.ಗುರುಸಿದ್ದ‌ನಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಂಡರು. ಇದೇ ವೇಳೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಟಿ.ಗುರುಸಿದ್ದನಗೌಡ ಪುತ್ರ ಡಾ.ರವಿಕುಮಾರ್‌ ಸಹ ಕಾಂಗ್ರೆಸ್ ಸೇರಿದ್ದಾರೆ.
RSS ಗುರುಸಿದ್ದನಗೌಡ-ಎಸ್ಎಸ್ ಮಲ್ಲಿಕಾರ್ಜುನ್
ಹಾಸನದಲ್ಲಿ ಮುಗಿಯದ ಬೇಗುದಿ: ಪ್ರೀತಂ ಗೌಡರನ್ನು ಟೀಕಿಸಿದ್ದ ಬಿಜೆಪಿ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿತ!
ನಂತರ ಮಾತನಾಡಿದ ಟಿ ಗುರುಸಿದ್ದನಗೌಡ ಅವರು, ನಾವು ಪಕ್ಷಕ್ಕಾಗಿ ನಿರಂತರವಾಗಿ ದುಡಿದಿದ್ದೇವೆ. ಆದರೆ ನಮಗೆ ಪಕ್ಷದಿಂದ ಅನ್ಯಾಯವಾಗಿದೆ. 20 ವರ್ಷಗಳಿಂದ ಸಂಸದರಾಗಿರುವ ಸಿದ್ದೇಶ್ವರ ಅವರು ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಬೇಕಿತ್ತು. ಈ ಬಾರಿ ನನ್ನ ಪುತ್ರ ಡಾ‌.ರವಿಕುಮಾರ್​ಗೆ ಬಿಜೆಪಿ ಟಿಕೆಟ್​ ಕೊಡಬೇಕಿತ್ತು. ಸಿದ್ದೇಶ್ವರಗೆ ವಯಸ್ಸಾಗಿದೆ. ಹೀಗಾಗಿ ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಬಿಜೆಪಿಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕಿಡಿಕಾರಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...