Sunday, August 2, 2026
Sunday, August 2, 2026

RSS ಆರ್ ಎಸ್ಎಸ್ ಕಟ್ಟಾಳು ಜಗಳೂರು ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆ

Date:

RSS ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೇ ದೊಡ್ಡದಿತ್ತು. ಈ ಮಧ್ಯೆ ಸಂಸದ ಸಿದ್ದೇಶ್ವರ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದರಿಂದ ಬೇಸರಗೊಂಡಿರುವ ದಾವಣಗೆರೆ ಜಗಳೂರು ಕ್ಷೇತ್ರದ ಮಾಜಿ ಶಾಸಕ, ಆರ್​ಎಸ್​​ಎಸ್ ಕಟ್ಟಾಳು ಟಿ ಗುರುಸಿದ್ದನಗೌಡ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.
ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ಅವರು, ಮಾಜಿ ಶಾಸಕ ಟಿ.ಗುರುಸಿದ್ದ‌ನಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಂಡರು. ಇದೇ ವೇಳೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಟಿ.ಗುರುಸಿದ್ದನಗೌಡ ಪುತ್ರ ಡಾ.ರವಿಕುಮಾರ್‌ ಸಹ ಕಾಂಗ್ರೆಸ್ ಸೇರಿದ್ದಾರೆ.
RSS ಗುರುಸಿದ್ದನಗೌಡ-ಎಸ್ಎಸ್ ಮಲ್ಲಿಕಾರ್ಜುನ್
ಹಾಸನದಲ್ಲಿ ಮುಗಿಯದ ಬೇಗುದಿ: ಪ್ರೀತಂ ಗೌಡರನ್ನು ಟೀಕಿಸಿದ್ದ ಬಿಜೆಪಿ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿತ!
ನಂತರ ಮಾತನಾಡಿದ ಟಿ ಗುರುಸಿದ್ದನಗೌಡ ಅವರು, ನಾವು ಪಕ್ಷಕ್ಕಾಗಿ ನಿರಂತರವಾಗಿ ದುಡಿದಿದ್ದೇವೆ. ಆದರೆ ನಮಗೆ ಪಕ್ಷದಿಂದ ಅನ್ಯಾಯವಾಗಿದೆ. 20 ವರ್ಷಗಳಿಂದ ಸಂಸದರಾಗಿರುವ ಸಿದ್ದೇಶ್ವರ ಅವರು ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಬೇಕಿತ್ತು. ಈ ಬಾರಿ ನನ್ನ ಪುತ್ರ ಡಾ‌.ರವಿಕುಮಾರ್​ಗೆ ಬಿಜೆಪಿ ಟಿಕೆಟ್​ ಕೊಡಬೇಕಿತ್ತು. ಸಿದ್ದೇಶ್ವರಗೆ ವಯಸ್ಸಾಗಿದೆ. ಹೀಗಾಗಿ ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಬಿಜೆಪಿಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕಿಡಿಕಾರಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...