Thursday, March 19, 2026
Thursday, March 19, 2026

Malenada Utsava ಬಂಗಾರಮಕ್ಕಿ ವೀರಾಂಜನೇಯ ಮಹಾ ಸಂಸ್ಥಾನದಲ್ಲಿಏ. 17-23 ಸಂಸ್ಕೃತಿ ಕುಂಭ-ಮಲೆನಾಡ ಉತ್ಸವ

Date:

Malenada Utsava ಬಂಗಾರಮಕ್ಕಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವಿಶ್ವ ವೀರಾಂಜನೇಯ ಮಹಾ ಸಂಸ್ಥಾನದಲ್ಲಿ ಏ. 17ರ ಶ್ರೀ ರಾಮ ನವಮಿಯಿಂದ ಏ. 23ರ ಹನುಮ ಜಯಂತಿವರೆಗೆ ಸಂಸ್ಕೃತಿ ಕುಂಭ – ಮಲೆನಾಡ ಉತ್ಸವ-2024 ಆಯೋಜನೆಗೊಂಡಿದೆ.

ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ವತಿಯಿಂದ ‘ಜಾತ್ರಾ ಮಹೋತ್ಸವ’ ಮತ್ತು ಸಿಲೆಕ್ಟ್ ಫೌಂಡೇಶನ್ (ರಿ.) ಸಹಭಾಗಿತ್ವದಲ್ಲಿ ನಡೆಯಲಿರುವ ಈ ವಿಶೇಷ ವಾರ್ಷಿಕ ಕಾರ್ಯಕ್ರಮದಲ್ಲಿ ಏ.17ರಂದು ಶ್ರೀ ರಾಮನವಮಿ ಜಾತಾ ಉತ್ಸವ, ಏ. 18ರಿಂದ 20ರವರೆಗೆ ಶರಾವತಿ ಆರತಿ, ಶರಾವತಿ ಕುಂಭ ಮಹೋತ್ಸವ ಏ. 22ರಂದು ಶ್ರೀ ದೇವರ ಪುಷ್ಪ ರಥೋತ್ಸವ, ಏ. 23ರಂದು ಶ್ರೀ ದೇವರ ಬ್ರಹ್ಮ ರಥೋತ್ಸವ ನಡೆಯಲಿದೆ.

ಶರಾವತಿ ಕುಂಭ ಮಲೆನಾಡ ಉತ್ಸವದಲ್ಲಿ ಏಳು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ವಿಶೇಷವಾಗಿ ಶ್ರೀ ಕ್ಷೇತ್ರದ ಧರ್ಮಾಽಕಾರಿ ಶ್ರೀ ಮಾರುತಿ ಗುರೂಜಿಯವರಿಂದ ಸತ್ಸಂಗ, ಭಕ್ತಿ ಸಂಗೀತ, ಭಜನೆ, ಗಾಯನ, ನೃತ್ಯ ವೈಭವ, ವಿವಿಧ ಶೈಲಿಯ ಕುಣಿತಗಳು ಪ್ರದರ್ಶನಗೊಳ್ಳಲಿದ್ದು, ಏ. 20 ರಂದು ಮಕ್ಕಳ ಸಾಹಿತ್ಯ ಸಮ್ಮೇಳನ, ಏ. 21ರಂದು ಮಕ್ಕಳ ಕವಿ-ಕಾವ್ಯ ಸಮ್ಮೇಳನಗಳು, ಏ. 22 ರಂದು ಗ್ರಾಮೀಣ ಕ್ರೀಡಾ ಸ್ಪರ್ಧೆ ಮತ್ತು ಏ.23 ರಂದು ದಂತ ಹಾಗೂ ಕಣ್ಣಿನ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ.

Malenada Utsava ವೈದ್ಯರ ಶಿಫಾರಸ್ಸಿನ ಅನ್ವಯ ಅಗತ್ಯವಿರುವವರಿಗೆ ಹೆಚ್ಚುವರಿ ದಂತ ಚಿಕಿತ್ಸೆ, ಕಣ್ಣಿನ ಸರ್ಜರಿ ಹಾಗೂ ಕನ್ನಡಕವನ್ನು ಉಚಿತವಾಗಿ ನೀಡಲಾಗುವುದು.

ಉತ್ಸವದ ವಿಶೇಷವಾಗಿ ವಸ್ತು ಪ್ರದರ್ಶನ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಇರಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿ ಹಾಗೂ ದೇವಾಲಯ ಆಡಳಿತ ಮಂಡಳಿ ಪದಾದಿಕಾರಿಗಳು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...