Monday, December 15, 2025
Monday, December 15, 2025

Malenada Utsava ಬಂಗಾರಮಕ್ಕಿ ವೀರಾಂಜನೇಯ ಮಹಾ ಸಂಸ್ಥಾನದಲ್ಲಿಏ. 17-23 ಸಂಸ್ಕೃತಿ ಕುಂಭ-ಮಲೆನಾಡ ಉತ್ಸವ

Date:

Malenada Utsava ಬಂಗಾರಮಕ್ಕಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವಿಶ್ವ ವೀರಾಂಜನೇಯ ಮಹಾ ಸಂಸ್ಥಾನದಲ್ಲಿ ಏ. 17ರ ಶ್ರೀ ರಾಮ ನವಮಿಯಿಂದ ಏ. 23ರ ಹನುಮ ಜಯಂತಿವರೆಗೆ ಸಂಸ್ಕೃತಿ ಕುಂಭ – ಮಲೆನಾಡ ಉತ್ಸವ-2024 ಆಯೋಜನೆಗೊಂಡಿದೆ.

ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ವತಿಯಿಂದ ‘ಜಾತ್ರಾ ಮಹೋತ್ಸವ’ ಮತ್ತು ಸಿಲೆಕ್ಟ್ ಫೌಂಡೇಶನ್ (ರಿ.) ಸಹಭಾಗಿತ್ವದಲ್ಲಿ ನಡೆಯಲಿರುವ ಈ ವಿಶೇಷ ವಾರ್ಷಿಕ ಕಾರ್ಯಕ್ರಮದಲ್ಲಿ ಏ.17ರಂದು ಶ್ರೀ ರಾಮನವಮಿ ಜಾತಾ ಉತ್ಸವ, ಏ. 18ರಿಂದ 20ರವರೆಗೆ ಶರಾವತಿ ಆರತಿ, ಶರಾವತಿ ಕುಂಭ ಮಹೋತ್ಸವ ಏ. 22ರಂದು ಶ್ರೀ ದೇವರ ಪುಷ್ಪ ರಥೋತ್ಸವ, ಏ. 23ರಂದು ಶ್ರೀ ದೇವರ ಬ್ರಹ್ಮ ರಥೋತ್ಸವ ನಡೆಯಲಿದೆ.

ಶರಾವತಿ ಕುಂಭ ಮಲೆನಾಡ ಉತ್ಸವದಲ್ಲಿ ಏಳು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ವಿಶೇಷವಾಗಿ ಶ್ರೀ ಕ್ಷೇತ್ರದ ಧರ್ಮಾಽಕಾರಿ ಶ್ರೀ ಮಾರುತಿ ಗುರೂಜಿಯವರಿಂದ ಸತ್ಸಂಗ, ಭಕ್ತಿ ಸಂಗೀತ, ಭಜನೆ, ಗಾಯನ, ನೃತ್ಯ ವೈಭವ, ವಿವಿಧ ಶೈಲಿಯ ಕುಣಿತಗಳು ಪ್ರದರ್ಶನಗೊಳ್ಳಲಿದ್ದು, ಏ. 20 ರಂದು ಮಕ್ಕಳ ಸಾಹಿತ್ಯ ಸಮ್ಮೇಳನ, ಏ. 21ರಂದು ಮಕ್ಕಳ ಕವಿ-ಕಾವ್ಯ ಸಮ್ಮೇಳನಗಳು, ಏ. 22 ರಂದು ಗ್ರಾಮೀಣ ಕ್ರೀಡಾ ಸ್ಪರ್ಧೆ ಮತ್ತು ಏ.23 ರಂದು ದಂತ ಹಾಗೂ ಕಣ್ಣಿನ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ.

Malenada Utsava ವೈದ್ಯರ ಶಿಫಾರಸ್ಸಿನ ಅನ್ವಯ ಅಗತ್ಯವಿರುವವರಿಗೆ ಹೆಚ್ಚುವರಿ ದಂತ ಚಿಕಿತ್ಸೆ, ಕಣ್ಣಿನ ಸರ್ಜರಿ ಹಾಗೂ ಕನ್ನಡಕವನ್ನು ಉಚಿತವಾಗಿ ನೀಡಲಾಗುವುದು.

ಉತ್ಸವದ ವಿಶೇಷವಾಗಿ ವಸ್ತು ಪ್ರದರ್ಶನ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಇರಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿ ಹಾಗೂ ದೇವಾಲಯ ಆಡಳಿತ ಮಂಡಳಿ ಪದಾದಿಕಾರಿಗಳು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...