Thursday, June 18, 2026
Thursday, June 18, 2026

Malenada Utsava ಬಂಗಾರಮಕ್ಕಿ ವೀರಾಂಜನೇಯ ಮಹಾ ಸಂಸ್ಥಾನದಲ್ಲಿಏ. 17-23 ಸಂಸ್ಕೃತಿ ಕುಂಭ-ಮಲೆನಾಡ ಉತ್ಸವ

Date:

Malenada Utsava ಬಂಗಾರಮಕ್ಕಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವಿಶ್ವ ವೀರಾಂಜನೇಯ ಮಹಾ ಸಂಸ್ಥಾನದಲ್ಲಿ ಏ. 17ರ ಶ್ರೀ ರಾಮ ನವಮಿಯಿಂದ ಏ. 23ರ ಹನುಮ ಜಯಂತಿವರೆಗೆ ಸಂಸ್ಕೃತಿ ಕುಂಭ – ಮಲೆನಾಡ ಉತ್ಸವ-2024 ಆಯೋಜನೆಗೊಂಡಿದೆ.

ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ವತಿಯಿಂದ ‘ಜಾತ್ರಾ ಮಹೋತ್ಸವ’ ಮತ್ತು ಸಿಲೆಕ್ಟ್ ಫೌಂಡೇಶನ್ (ರಿ.) ಸಹಭಾಗಿತ್ವದಲ್ಲಿ ನಡೆಯಲಿರುವ ಈ ವಿಶೇಷ ವಾರ್ಷಿಕ ಕಾರ್ಯಕ್ರಮದಲ್ಲಿ ಏ.17ರಂದು ಶ್ರೀ ರಾಮನವಮಿ ಜಾತಾ ಉತ್ಸವ, ಏ. 18ರಿಂದ 20ರವರೆಗೆ ಶರಾವತಿ ಆರತಿ, ಶರಾವತಿ ಕುಂಭ ಮಹೋತ್ಸವ ಏ. 22ರಂದು ಶ್ರೀ ದೇವರ ಪುಷ್ಪ ರಥೋತ್ಸವ, ಏ. 23ರಂದು ಶ್ರೀ ದೇವರ ಬ್ರಹ್ಮ ರಥೋತ್ಸವ ನಡೆಯಲಿದೆ.

ಶರಾವತಿ ಕುಂಭ ಮಲೆನಾಡ ಉತ್ಸವದಲ್ಲಿ ಏಳು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ವಿಶೇಷವಾಗಿ ಶ್ರೀ ಕ್ಷೇತ್ರದ ಧರ್ಮಾಽಕಾರಿ ಶ್ರೀ ಮಾರುತಿ ಗುರೂಜಿಯವರಿಂದ ಸತ್ಸಂಗ, ಭಕ್ತಿ ಸಂಗೀತ, ಭಜನೆ, ಗಾಯನ, ನೃತ್ಯ ವೈಭವ, ವಿವಿಧ ಶೈಲಿಯ ಕುಣಿತಗಳು ಪ್ರದರ್ಶನಗೊಳ್ಳಲಿದ್ದು, ಏ. 20 ರಂದು ಮಕ್ಕಳ ಸಾಹಿತ್ಯ ಸಮ್ಮೇಳನ, ಏ. 21ರಂದು ಮಕ್ಕಳ ಕವಿ-ಕಾವ್ಯ ಸಮ್ಮೇಳನಗಳು, ಏ. 22 ರಂದು ಗ್ರಾಮೀಣ ಕ್ರೀಡಾ ಸ್ಪರ್ಧೆ ಮತ್ತು ಏ.23 ರಂದು ದಂತ ಹಾಗೂ ಕಣ್ಣಿನ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ.

Malenada Utsava ವೈದ್ಯರ ಶಿಫಾರಸ್ಸಿನ ಅನ್ವಯ ಅಗತ್ಯವಿರುವವರಿಗೆ ಹೆಚ್ಚುವರಿ ದಂತ ಚಿಕಿತ್ಸೆ, ಕಣ್ಣಿನ ಸರ್ಜರಿ ಹಾಗೂ ಕನ್ನಡಕವನ್ನು ಉಚಿತವಾಗಿ ನೀಡಲಾಗುವುದು.

ಉತ್ಸವದ ವಿಶೇಷವಾಗಿ ವಸ್ತು ಪ್ರದರ್ಶನ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಇರಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿ ಹಾಗೂ ದೇವಾಲಯ ಆಡಳಿತ ಮಂಡಳಿ ಪದಾದಿಕಾರಿಗಳು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...