Monday, February 2, 2026
Monday, February 2, 2026

DC Shivamogga ಭದ್ರಾವತಿಯಲ್ಲಿ ಈ ಬಾರಿ ಮತದಾನ ಪ್ರಮಾಣ ಹೆಚ್ಚಾಗಬೇಕು- ಸ್ನೇಹಲ್ ಸುಧಾಕರ್ ಲೋಖಂಡೆ

Date:

DC Shivamogga ಭದ್ರಾವತಿಯಲ್ಲಿ ಬೃಹತ್ ಸಂಖ್ಯೆಯಲ್ಲಿ ಗೃಹ ರಕ್ಷಕ ದಳ, ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಎನ್.ಸಿ.ಸಿ., ಎನ್.ಎಸ್.ಎಸ್. ವಿದ್ಯಾರ್ಥಿಗಳು ಸೇರಿ ವಿಎಸ್ ಎಲ್ ಗೇಟ್ ನಿಂದ ಪೆರೇಡ್ ನಲ್ಲಿ ಸಾಗಿ, ಕನಕಬಮಂಟಪದಲ್ಲಿ ಸ್ವೀಪ್, ಮೇ 7 ಆಕಾರದಲ್ಲಿ ಚಿತ್ತಾರ ಮೂಡಿಸಿ, ಅತ್ಯಾಕರ್ಷಕವಾಗಿ
ಮೊಬೈಲ್ ಟಾರ್ಚ್ ಗಳನ್ನು ಆಕಾಶಕ್ಕೆ ತೋರಿಸುತ್ತಾ ಸ್ವೀಪ್ ಆಕೃತಿ ಮೂಡಿಸಿ ಎಲ್ಲರ ಗಮನ ಸೆಳೆಯುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.

ಈ ವೇಳೆ ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಚುನಾವಣೆ ದೊಡ್ಡ ಪರ್ವ. ಮತದಾನ ನಮ್ಮೆಲ್ಲರ ಹಕ್ಕು.ತಾವು ಮತದಾನ ಮಾಡಿ ಅಕ್ಕಪಕ್ಕದವರೂ ಮತದಾನ ಮಾಡುವಂತೆ ತಿಳಿಸಬೇಕು. ಶೇ.೧೦೦ ರಷ್ಟು ಮತದಾನ ಮಾಡುವಂತೆ ಮನವಿ ಮಾಡಿದರು.

ಭದ್ರಾವತಿಯಲ್ಲಿ ಈ ಬಾರಿ ಮತದಾನದ ಪ್ರಮಾಣ ಹೆಚ್ಚಬೇಕು ಎಂದರು.
ಶಿವಮೊಗ್ಗ ಎಸಿ ಸತ್ಯನಾರಾಯಣ ಮಾತನಾಡಿ, ಆಸೆ, ಆಮಿಷಗಳಿಗೆ ಗುರಿಯಾಗದೆ, ನಿರ್ಭೀತವಾಗಿ ಮತದಾನ ಮಾಡುವ ಮೂಲಕ
ಸುಭದ್ರ ಪ್ರಜಾಪ್ರಭುತ್ವ ರೂಪಿಸಲು ಅನುವುಮಾಡಿಜೊಡಬೇಕು ಎಂದರು.

ಜಿ.ಪಂ. ಸಿಪಿಒ ಗಾಯತ್ರಿ ಮತದಾನ ನಮ್ಮೆಲ್ಲರ ಸಮಾನ ಹಕ್ಕು ಮತದಾನ ಮಾಡಲು ಮರಿಯಬೇಡಿ ಎಂದರು. ನಾವು ಶಿವಮೊಗ್ಗ ಭದ್ರಾವತಿ ಜನ
ಮಾಡೇ ಮಾಡ್ತಿವಿ ಮತದಾನ ಎಂಬ ಘೋಷಣೆ ಕೂಗಿದರು.

DC Shivamogga ಚುನಾವಣಾ ಪರ್ವ ದೇಶದ ಗರ್ವ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಎಲ್ಲರನ್ನು ಮತದಾನ ಮಾಡಲು ಪ್ರೇರೇಪಿಸಿದರು.

ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹ್ಮದ್ ಪರ್ವೀಜ್ ಮತದಾನ ಪ್ರತಿಜ್ಞಾವಿಧಿ ಬೋಧಿಸಿದರು.
ಚುನಾವಣೆ ಗೀತೆ ಗಾಯನ ಮಾಡಲಾಯಿತು.

ಗೃಹ ರಕ್ಷಕ ದಳದ ಕಮಾಂಡೆಂಟ್ ಡಾ.ಚೇತನ್, ಭದ್ರಾವತಿ ಇಓ ಗಂಗಣ್ಣ, ನಗರಸಭೆ ಆಯುಕ್ತರಾದ ಚನ್ನಪ್ಪ, ಸುಹಾಸಿನಿ, ಬಿಇಓ, ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...