Friday, March 20, 2026
Friday, March 20, 2026

Geeta Shivaraj kumar ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಬಡ ಅಶಕ್ತ ಕುಟುಂಬದ ಮಹಿಳೆಯರ ಬದುಕು ಸುಂದರ- ಗೀತಾ ಶಿವರಾಜ್ ಕುಮಾರ್

Date:

Geeta Shivaraj kumar ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು ಒಲವು ತೋರುತ್ತಿದ್ದಾರೆ. ಆದ್ದರಿಂದ, ಈ ಭಾರಿಯ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಭರವಸೆ ವ್ಯಕ್ತಪಡಿಸಿದರು.
ಅವರು ಶಿಕಾರಿಪುರ ತಾಲೂಕಿನ ವ್ಯಾಪ್ತಿಯ ತೊಗರ್ಸಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಸಭೆಯಲ್ಲಿ ಮತಯಾಚನೆ ಮಾತನಾಡಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬದ ಮಹಿಳೆಯರು, ಅಶಕ್ತ ಕುಟುಂಬಗಳು ಸುಂದರ ಬದುಕು ಕಟ್ಟಿಕೊಂಡಿದ್ದಾರೆ. ಇಲ್ಲಿ ಗ್ಯಾರಂಟಿ ಭಾಗ್ಯಗಳು ಎಲ್ಲಾ ಧರ್ಮ, ಸಮುದಾಯಗಳ ಜನಮನ ಗೆದ್ದಿವೆ. ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಕನಸು ನನಸಾಗಿದೆ ಎಂದರು.
Geeta Shivaraj kumar ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರಿಗೆ ತಾಲ್ಲೂಕಿನ ಜನ ಪ್ರೀತಿಯಿಂದ ಕಾಣುತ್ತಿದ್ದರು. ಅವರ ಜನಪರ ಸೇವೆಯನ್ನು ಮುಂದುವರೆಸಿಕೊAಡು ಹೋಗಲು ನನಗೂ ಅವಕಾಶ ಕಲ್ಪಿಸಿಕೊಡಿ ಎಂದು ಕೋರಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ಈ ಭಾಗದಲ್ಲಿ ಯಾವುದೇ ನಾಯಕರನ್ನು ಬೆಳೆಯಲು ಬಿಡಲಿಲ್ಲ. ೪೦ ವರ್ಷಗಳಿಂದ ಈ ಭಾಗದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿಕೊಂಡು ಬರಲಾಗುತ್ತಿದೆ. ಇದು ಯಡಿಯೂರಪ್ಪ ಕುಟುಂಬ ಸದಸ್ಯರ ಸಾಧನೆ ಎಂದು ವ್ಯಂಗ್ಯವಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...