Monday, May 4, 2026
Monday, May 4, 2026

Geeta Shivaraj kumar ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಬಡ ಅಶಕ್ತ ಕುಟುಂಬದ ಮಹಿಳೆಯರ ಬದುಕು ಸುಂದರ- ಗೀತಾ ಶಿವರಾಜ್ ಕುಮಾರ್

Date:

Geeta Shivaraj kumar ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು ಒಲವು ತೋರುತ್ತಿದ್ದಾರೆ. ಆದ್ದರಿಂದ, ಈ ಭಾರಿಯ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಭರವಸೆ ವ್ಯಕ್ತಪಡಿಸಿದರು.
ಅವರು ಶಿಕಾರಿಪುರ ತಾಲೂಕಿನ ವ್ಯಾಪ್ತಿಯ ತೊಗರ್ಸಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಸಭೆಯಲ್ಲಿ ಮತಯಾಚನೆ ಮಾತನಾಡಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬದ ಮಹಿಳೆಯರು, ಅಶಕ್ತ ಕುಟುಂಬಗಳು ಸುಂದರ ಬದುಕು ಕಟ್ಟಿಕೊಂಡಿದ್ದಾರೆ. ಇಲ್ಲಿ ಗ್ಯಾರಂಟಿ ಭಾಗ್ಯಗಳು ಎಲ್ಲಾ ಧರ್ಮ, ಸಮುದಾಯಗಳ ಜನಮನ ಗೆದ್ದಿವೆ. ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಕನಸು ನನಸಾಗಿದೆ ಎಂದರು.
Geeta Shivaraj kumar ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರಿಗೆ ತಾಲ್ಲೂಕಿನ ಜನ ಪ್ರೀತಿಯಿಂದ ಕಾಣುತ್ತಿದ್ದರು. ಅವರ ಜನಪರ ಸೇವೆಯನ್ನು ಮುಂದುವರೆಸಿಕೊAಡು ಹೋಗಲು ನನಗೂ ಅವಕಾಶ ಕಲ್ಪಿಸಿಕೊಡಿ ಎಂದು ಕೋರಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ಈ ಭಾಗದಲ್ಲಿ ಯಾವುದೇ ನಾಯಕರನ್ನು ಬೆಳೆಯಲು ಬಿಡಲಿಲ್ಲ. ೪೦ ವರ್ಷಗಳಿಂದ ಈ ಭಾಗದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿಕೊಂಡು ಬರಲಾಗುತ್ತಿದೆ. ಇದು ಯಡಿಯೂರಪ್ಪ ಕುಟುಂಬ ಸದಸ್ಯರ ಸಾಧನೆ ಎಂದು ವ್ಯಂಗ್ಯವಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...