Sunday, August 2, 2026
Sunday, August 2, 2026

Geeta Shivaraj kumar ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಬಡ ಅಶಕ್ತ ಕುಟುಂಬದ ಮಹಿಳೆಯರ ಬದುಕು ಸುಂದರ- ಗೀತಾ ಶಿವರಾಜ್ ಕುಮಾರ್

Date:

Geeta Shivaraj kumar ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು ಒಲವು ತೋರುತ್ತಿದ್ದಾರೆ. ಆದ್ದರಿಂದ, ಈ ಭಾರಿಯ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಭರವಸೆ ವ್ಯಕ್ತಪಡಿಸಿದರು.
ಅವರು ಶಿಕಾರಿಪುರ ತಾಲೂಕಿನ ವ್ಯಾಪ್ತಿಯ ತೊಗರ್ಸಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಸಭೆಯಲ್ಲಿ ಮತಯಾಚನೆ ಮಾತನಾಡಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬದ ಮಹಿಳೆಯರು, ಅಶಕ್ತ ಕುಟುಂಬಗಳು ಸುಂದರ ಬದುಕು ಕಟ್ಟಿಕೊಂಡಿದ್ದಾರೆ. ಇಲ್ಲಿ ಗ್ಯಾರಂಟಿ ಭಾಗ್ಯಗಳು ಎಲ್ಲಾ ಧರ್ಮ, ಸಮುದಾಯಗಳ ಜನಮನ ಗೆದ್ದಿವೆ. ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಕನಸು ನನಸಾಗಿದೆ ಎಂದರು.
Geeta Shivaraj kumar ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರಿಗೆ ತಾಲ್ಲೂಕಿನ ಜನ ಪ್ರೀತಿಯಿಂದ ಕಾಣುತ್ತಿದ್ದರು. ಅವರ ಜನಪರ ಸೇವೆಯನ್ನು ಮುಂದುವರೆಸಿಕೊAಡು ಹೋಗಲು ನನಗೂ ಅವಕಾಶ ಕಲ್ಪಿಸಿಕೊಡಿ ಎಂದು ಕೋರಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ಈ ಭಾಗದಲ್ಲಿ ಯಾವುದೇ ನಾಯಕರನ್ನು ಬೆಳೆಯಲು ಬಿಡಲಿಲ್ಲ. ೪೦ ವರ್ಷಗಳಿಂದ ಈ ಭಾಗದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿಕೊಂಡು ಬರಲಾಗುತ್ತಿದೆ. ಇದು ಯಡಿಯೂರಪ್ಪ ಕುಟುಂಬ ಸದಸ್ಯರ ಸಾಧನೆ ಎಂದು ವ್ಯಂಗ್ಯವಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...