Saturday, December 6, 2025
Saturday, December 6, 2025

Madhu Bangarappa ಶಿವಮೊಗ್ಗದಲ್ಲಿ ಬಿಜೆಪಿಗೆ ಸೋಲಿನ ರುಚಿ ತೋರಿಸುವೆ- ಮಧು ಬಂಗಾರಪ್ಪ

Date:

Madhu Bangarappa ಲೋಕಸಭೆ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಗೆಲುವಿನ ಹಂತ ಮೀರಿ ಮುಂದಿದ್ದಾರೆ. ಇದನ್ನರಿತಿರುವÀ ಬಿಜೆಪಿಯವರು ಮೋದಿ ಹೆಸರಲ್ಲಿ ಸುಳ್ಳು ಬಿತ್ತುತ್ತಿದ್ದಾರೆ. ಜನರನ್ನು ವಂಚಿಸುತ್ತಿದ್ದಾರೆ. ಹೇಗಾದರೂ ಗೆಲ್ಲಬೇಕೆಂದು ಹೊರಟಿದ್ದಾರೆ. ಆದರೆ
ಈ ಬಾರಿ ಬಿಜೆಪಿಗೆ ಸೋಲಿನ ರುಚಿ ತೋರಿಸುತ್ತೇವೆ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರೂ ಯಾವ ಮಟ್ಟಕ್ಕೆ ಸುಳ್ಳನ್ನು ಹೇಳುತ್ತಾರೆ ಎಂದರೆ ಬಂಗಾರಪ್ಪ ಸಂಸದರಾಗಿ ಗೆದ್ದಿದ್ದು ಬಿಜೆಪಿಯಿಂದ ಎಂದು ಹೇಳುತ್ತಾರೆ. ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ಕೊಟ್ಟಿದ್ದು ಬಂಗಾರಪ್ಪ. ಬಂಗಾರಪ್ಪನವರಿAದಲೇ ಕರ್ನಾಟಕದಲ್ಲಿ ಬಿಜೆಪಿಗೆ ನೆಲೆಸಿಕ್ಕಿದ್ದು ಎನ್ನುವುದು ಮೊದಲು ನೆನಪಿರಲಿ. ಅವರ ಬಗ್ಗೆ ಕೀಳು ಮಟ್ಟದಲ್ಲಿ ಮಾತಾಡುವ ಅವಶ್ಯಕತೆ ಇಲ್ಲ. ಬಂಗಾರಪ್ಪ ಆಶೀರ್ವಾದದಿಂದಲೆ ಕೆಲವು ಬಿಜೆಪಿಯ ನಾಯಕರು ಎಲ್ಲಾ ಅಧಿಕಾರವನ್ನು ಅನುಭವಿಸಿದ್ದಾರೆ. ಯಡಿಯೂರಪ್ಪ ಸೋತಾಗ ಅವರನ್ನು ಗೆಲ್ಲಿಸಿದ್ದೇ ಬಂಗಾರಪ್ಪ ಎಂದು ನೆನೆಪಿಸಿದರು.
Madhu Bangarappa ಯಡಿಯೂರಪ್ಪನವರಿಗೆ ಬಂಗಾರಪ್ಪನವರಿಂದ ಬಲ ಬಂದಿದ್ದು. ನಂತರ ಬಿಜೆಪಿಯ ಹೊಲಸು ರಾಜಕಾರಣಕ್ಕೆ ಬೇಸತ್ತು ಪಕ್ಷ ತೊರೆದು ಸಮಾಜವಾದಿ ಪಕ್ಷದಿಂದ ನಿಂತು ಗೆದ್ದಿದ್ದರು ಅ ಚುನಾವಣೆಯಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿ ಪಡುವಂತಾಗಿತ್ತು .ಆಗ ನಿಮಗೆ ಶಕ್ತಿ ಇರಲಿಲ್ಲವೇ ಎಂದು ಪ್ರಶ್ನಿಸಿದ ಮಧು, ರಾಜಕೀಯವಾಗಿ ಯಡಿಯೂರಪ್ಪನವರ ಫ್ಯಾಮಿಲಿ ಬಂಗಾರಪ್ಪನವರ ಋಣದಲ್ಲಿದೆ ಎನ್ನುವುದು ನೆನಪಿರಲಿ ಎಂದು ಛೇಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...