Wednesday, October 2, 2024
Wednesday, October 2, 2024

Madhu Bangarappa ಶಿವಮೊಗ್ಗದಲ್ಲಿ ಬಿಜೆಪಿಗೆ ಸೋಲಿನ ರುಚಿ ತೋರಿಸುವೆ- ಮಧು ಬಂಗಾರಪ್ಪ

Date:

Madhu Bangarappa ಲೋಕಸಭೆ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಗೆಲುವಿನ ಹಂತ ಮೀರಿ ಮುಂದಿದ್ದಾರೆ. ಇದನ್ನರಿತಿರುವÀ ಬಿಜೆಪಿಯವರು ಮೋದಿ ಹೆಸರಲ್ಲಿ ಸುಳ್ಳು ಬಿತ್ತುತ್ತಿದ್ದಾರೆ. ಜನರನ್ನು ವಂಚಿಸುತ್ತಿದ್ದಾರೆ. ಹೇಗಾದರೂ ಗೆಲ್ಲಬೇಕೆಂದು ಹೊರಟಿದ್ದಾರೆ. ಆದರೆ
ಈ ಬಾರಿ ಬಿಜೆಪಿಗೆ ಸೋಲಿನ ರುಚಿ ತೋರಿಸುತ್ತೇವೆ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರೂ ಯಾವ ಮಟ್ಟಕ್ಕೆ ಸುಳ್ಳನ್ನು ಹೇಳುತ್ತಾರೆ ಎಂದರೆ ಬಂಗಾರಪ್ಪ ಸಂಸದರಾಗಿ ಗೆದ್ದಿದ್ದು ಬಿಜೆಪಿಯಿಂದ ಎಂದು ಹೇಳುತ್ತಾರೆ. ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ಕೊಟ್ಟಿದ್ದು ಬಂಗಾರಪ್ಪ. ಬಂಗಾರಪ್ಪನವರಿAದಲೇ ಕರ್ನಾಟಕದಲ್ಲಿ ಬಿಜೆಪಿಗೆ ನೆಲೆಸಿಕ್ಕಿದ್ದು ಎನ್ನುವುದು ಮೊದಲು ನೆನಪಿರಲಿ. ಅವರ ಬಗ್ಗೆ ಕೀಳು ಮಟ್ಟದಲ್ಲಿ ಮಾತಾಡುವ ಅವಶ್ಯಕತೆ ಇಲ್ಲ. ಬಂಗಾರಪ್ಪ ಆಶೀರ್ವಾದದಿಂದಲೆ ಕೆಲವು ಬಿಜೆಪಿಯ ನಾಯಕರು ಎಲ್ಲಾ ಅಧಿಕಾರವನ್ನು ಅನುಭವಿಸಿದ್ದಾರೆ. ಯಡಿಯೂರಪ್ಪ ಸೋತಾಗ ಅವರನ್ನು ಗೆಲ್ಲಿಸಿದ್ದೇ ಬಂಗಾರಪ್ಪ ಎಂದು ನೆನೆಪಿಸಿದರು.
Madhu Bangarappa ಯಡಿಯೂರಪ್ಪನವರಿಗೆ ಬಂಗಾರಪ್ಪನವರಿಂದ ಬಲ ಬಂದಿದ್ದು. ನಂತರ ಬಿಜೆಪಿಯ ಹೊಲಸು ರಾಜಕಾರಣಕ್ಕೆ ಬೇಸತ್ತು ಪಕ್ಷ ತೊರೆದು ಸಮಾಜವಾದಿ ಪಕ್ಷದಿಂದ ನಿಂತು ಗೆದ್ದಿದ್ದರು ಅ ಚುನಾವಣೆಯಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿ ಪಡುವಂತಾಗಿತ್ತು .ಆಗ ನಿಮಗೆ ಶಕ್ತಿ ಇರಲಿಲ್ಲವೇ ಎಂದು ಪ್ರಶ್ನಿಸಿದ ಮಧು, ರಾಜಕೀಯವಾಗಿ ಯಡಿಯೂರಪ್ಪನವರ ಫ್ಯಾಮಿಲಿ ಬಂಗಾರಪ್ಪನವರ ಋಣದಲ್ಲಿದೆ ಎನ್ನುವುದು ನೆನಪಿರಲಿ ಎಂದು ಛೇಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...