Sunday, December 14, 2025
Sunday, December 14, 2025

Geeta Shivaraj kumar ಅಮೂಲ್ಯ ಮತ ನೀಡಿ ಆಶೀರ್ವದಿಸಿ, ಹಕ್ಕಿಪಿಕ್ಕಿ ಸಮುದಾಯಕ್ಕೆ ಗೀತಾ ಶಿವರಾಜ್ ಕುಮಾರ್ ಮನವಿ

Date:

Geeta Shivaraj kumar ಹಕ್ಕಿ- ಪಿಕ್ಕಿ ಸಮುದಾಯಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಅಪಾರ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು.

ತಾಲ್ಲೂಕಿನ ಬಿ.ಬೀರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಕ್ಕಿ ಪಿಕ್ಕಿ ಕ್ಯಾಂಪ್ ನಲ್ಲಿ ಬುಧವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಹಕ್ಕಿಪಿಕ್ಕಿ ಅಲೆಮಾರಿ ಸಮುದಾಯಕ್ಕೆ ಬಂಗಾರಪ್ಪ ಆಡಳಿತದಲ್ಲಿ 101 ಜನ ರೈತರಿಗೆ ಭೂ ಹಕ್ಕು ಪತ್ರ ನೀಡಿದ್ದರು. ಅದೇ ರೀತಿ, ₹13 ಕೋಟಿ ವೆಚ್ಚದಲ್ಲಿ ಆಶ್ರಮ ಶಾಲೆ ತೆರೆದು ಬಡವರಿಗೆ ಆಶಾಕಿರಣ ಆಗಿದ್ದರು ಎಂದರು.

ಗ್ರಾಮದ ಎಲ್ಲಾ ಭಾಗದಲ್ಲಿ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಿಕೊಟ್ಟಿದ್ದರು. ಇಲ್ಲಿ 127 ಜನ ರೈತರು ಸಾಗುವಳಿ ಪತ್ರವನ್ನು ಬಂಗಾರಪ್ಪ ಅವರ ಕಾಲದಲ್ಲಿ ಪಡೆದಿದ್ದರು ಎಂದರು.

ಬಂಗಾರಪ್ಪ ಅವರ ಹಾದಿಯಲ್ಲಿ ಸಾಗಲು, ನನಗೂ ಅವಕಾಶ ಕಲ್ಪಿಸಿಕೊಡಿ. ಮೇ.೭ ರಂದು ನಡೆಯುವ ಚುನಾವಣೆಯಲ್ಲಿ ಅಮೂಲ್ಯವಾದ ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.

Geeta Shivaraj kumar ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಮಾತನಾಡಿ, ಸಮುದಾಯದ ಏಳಿಗೆಗೆ ಕಾಂಗ್ರೆಸ್ ಪಕ್ಷ ಸದಾ ಸಿದ್ದ. ಹಿಂದುಳಿದ ಸಮುದಾಯದವರು ಬಿ.ಆರ್.ಅಂಬೇಡ್ಕರ್ ನೀಡಿದ ಕಾನೂನನ್ನು ಮೊದಲು ತಿಳಿದುಕೊಳ್ಳಬೇಕು. ಸಂವಿಧಾನವನ್ನು ಅಳಿಸಲು ಹೊರಟವರನ್ನು ಈ ಚುನಾವಣೆಯಲ್ಲಿ ಸೋಲಿಸಬೇಕು. ಇಲ್ಲಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ, ಆರಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದ ವಿಜಯ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಸಮುದಾಯದ ಸಹಕಾರ ಬೇಕು ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಪಿಳ್ಳಂಗಿರಿ, ಕೂಡ್ಲಿ, ಬಿ.ಬೀರನಹಳ್ಳಿ, ಶೆಟ್ಟಿಹಳ್ಳಿ, ಹಸೂಡಿ ಫಾಂ, ನಿದಿಗೆ- ಬಿದರೆ, ಸೋಗಾನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...