Tuesday, February 3, 2026
Tuesday, February 3, 2026

DC Shivamogga ಯಾವುದೇ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡಿ- ಗುರುದತ್ತ ಹೆಗ್ಗಡೆ

Date:

DC Shivamogga ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಮತದಾರರು ಸಕ್ರಿಯವಾಗಿ ಮತದಾನ ಹಬ್ಬದಲ್ಲಿ ಭಾಗವಹಿಸಿ, ಯಾವುದೇ ಆಮಿಷಗಳಿಗೆ ಒಳಗಾಗದೇ ನೈತಿಕ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತದಾರರಿಗೆ ಕರೆ ನೀಡಿದರು.

ಶಿವಮೊಗ್ಗ ನಗರದ ನೆಹರೂ ಮೈದಾನದಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಶಿವಮೊಗ್ಗ ಜಿಲ್ಲಾ ಜಾಗೃತ ಮತದಾರರ ವೇದಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಗರ ವ್ಯಾಪ್ತಿಯಲ್ಲಿ ಮತದಾನ ಮಾಡಲು ಜನರು ನಿರಾಸಕ್ತಿ ತೋರುತ್ತಿದ್ದು, ಈ ಬಾರಿ ಹಾಗಾಗದೇ ಎಲ್ಲರೂ ಸಕ್ರಿಯವಾಗಿ ಮತದಾನ ಮಾಡಬೇಕು. ಹಾಗೂ ಮತ ಹಾಕಲು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡೋಣ ಎಂದರು.

DC Shivamogga ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಶಿವಮೊಗ್ಗದಲ್ಲಿ ಶೇ.100 ರಷ್ಟು ಮತದಾನ ಮಾಡಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಯಾರು ಕೂಡ ಮತದಾನದಿಂದ ವಂಚಿತರಾಗುವುದು ಬೇಡವೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಳಾದ ಸಿ ಎಸ್ ಗಾಯತ್ರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಮಂಜುನಾಥ್, ಜಾಗೃತ ಮತದಾರರ ವೇದಿಕೆಯ ಕೆ.ಸಿ. ಬಸವರಾಜ್ ಹಾಗೂ ಪದಾಧಿಕಾರಿಗಳು, ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೇಜ್, ಸಾರ್ವಜನಿಕರು, ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...