Friday, March 20, 2026
Friday, March 20, 2026

DC Shivamogga ಆಗುಂಬೆ ಹೋಬಳಿ ಬಾಳೆಹಳ್ಳಿ,ಉಳುಮಡಿ, ಸುರುಳಿಗದ್ದೆ,ಕಣಗುಲ್ ಗ್ರಾಮಗಳಲ್ಲಿ ರಸ್ತೆ ಬೇಡಿಕೆ ಇಟ್ಟು ಮತದಾನ ಬಹಿಷ್ಕಾರ

Date:

DC Shivamogga ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಬಾಳೆಹಳ್ಳಿ ಗ್ರಾಮ, ಉಳುಮಡಿ ,ಸುರುಳಿಗದ್ದೆ, ಕಣಗುಲ್ ,ಈ ಗ್ರಾಮಗಳಿಗೆ ‌ ರಸ್ತೆ ಮಾರ್ಗ ಆಗುವರೆಗೂ ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸುಮಾರು 40 ರಿಂದ 45 ಕುಟುಂಬಗಳು ವಾಸವಾಗಿರುವ ಈ ಗ್ರಾಮಗಳಲ್ಲಿ ವಾಸದ ಮನೆಗಳಿಗೆ ಸರಿಯಾದ ರಸ್ತೆ ಸಂಪರ್ಕವಿಲ್ಲ ರಸ್ತೆ ಸರಿ ಇಲ್ಲದ ಕಾರಣ 20 ರಿಂದ 30 ಜನ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಕೂಡ ತೊಂದರೆಯಾಗುತ್ತಿದೆ. ಇದೇ ರಸ್ತೆ ಸಮಸ್ಯೆಯಿಂದ ಇಲ್ಲಿನ ಯುವಕರಿಗೆ ಹೆಣ್ಣು ಕೂಡ ಸಿಗುತ್ತಿಲ್ಲ ಎನ್ನುವುದು ನೊಂದ ಯುವಕರ ದೂರು.

DC Shivamogga ಗ್ರಾಮಕ್ಕೆ ಕರೆಂಟಿನ ವ್ಯವಸ್ಥೆ ಇದ್ದರೂ ಕೂಡ ಸರಿಯಾದ ಟಿಸಿ ಇರದೆ ನೀರಿನ ಸಮಸ್ಯೆ ಕೂಡ ಎದುರಾಗಿದೆ. ಹಾಗೆ ಗ್ರಾಮದ ಹಳ್ಳಗಳಿಗೆ ಹೋಗಲು ಇರುವ ಕಲ್ಲು ಸಂಕಗಳಿಗೆ ಸರಿಯಾದ ಮಾರ್ಗಗಳು ಇಲ್ಲದೆ ಅವ್ಯವಸ್ಥೆಯ ಆಗರವಾಗಿದೆ ಕೂಡಲೇ ಇವೆಲ್ಲವನ್ನೂ ಸರಿಪಡಿಸಬೇಕು ಇಲ್ಲವಾದರೆ ನಾವು ಯಾವುದೇ ರೀತಿಯಿಂದಲೂ ಮತಗಳನ್ನು ಚಲಾಯಿಸುವುದಿಲ್ಲ ಈ ಇಡೀ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಮುಖೇನ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...