Tuesday, May 5, 2026
Tuesday, May 5, 2026

Breaking News ಪ್ರೀತಿಸುವಂತೆ ಕಿರುಕುಳ,ನಿರಾಕರಿಸಿದ ಯುವತಿಯನ್ನ ಕೊಲೆ ಮಾಡಿದ ಯುವಕ

Date:

Breaking News ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ 24ರ ಹರೆಯದ ಯುವತಿಯೊಬ್ಬಳನ್ನು ಕಾಲೇಜು ಕ್ಯಾಂಪಸ್‌ನಲ್ಲಿ ಇಂದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಯುವಕನೋರ್ವ ಕಾಲೇಜಿನಿಂದ ಯುವತಿ ಹೊರಬರುವುದಕ್ಕೆ ಕಾಯುತ್ತಿದ್ದು ಆಕೆಯ ಮೇಲೆ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ.

ಸಂತ್ರಸ್ತೆ ನೇಹಾ ಹಿರೇಮಠ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನಿರಂಜನ ಹಿರೇಮಠ ಪುತ್ರಿ ಎಂದು ತಿಳಿದುಬಂದಿದೆ.

ಕೊಲೆಯ ನಂತರ ತನಿಖೆ ಆರಂಭಿಸಿದ ಪೊಲೀಸರು ಆರೋಪಿ ಫಯಾಜ್ ಎಂಬಾತನನ್ನು ಬೆಳಗಾವಿ ಜಿಲ್ಲೆಯ ಸೌದತ್ತಿಯಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ಸಂತ್ರಸ್ತೆಯ ಸೀನಿಯರ್ ಕಾಲೇಜಿನಲ್ಲಿಯೇ ಓದುತ್ತಿದ್ದನು. ಕೊಲೆಯ ನಂತರ ಆರೋಪಿ ಕೈಯಲ್ಲಿ ಚಾಕು ಹಿಡಿದು ಸ್ಥಳದಿಂದ ತೆರಳಿದ್ದಾರೆ. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ನೇಹಾಳನ್ನು ಸಹಪಾಠಿಗಳು ಮತ್ತು ಅಧ್ಯಾಪಕರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ದುಃಖತಪ್ತ ಪೋಷಕರಿಗೆ ಸಾಂತ್ವನ ಹೇಳಿದರು.

Breaking News ನೇಹಾ ಬಿವಿಬಿಯಲ್ಲಿ ಎಂಸಿಎ 1ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಲವು ತಿಂಗಳಿಂದ ಆರೋಪಿ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನು. ಇತ್ತೀಚೆಗೆ ಆಕೆಗೆ ಪ್ರಪೋಸ್ ಮಾಡಿದ್ದನ್ನು ಸಂತ್ರಸ್ತೆ ತಿರಸ್ಕರಿಸಿದ್ದಳು. ಆಕೆಯ ನಡೆಯಿಂದ ಕುಪಿತಗೊಂಡ ಆರೋಪಿ ನೇಹಾಳನ್ನು ಕೊಲೆ ಮಾಡಲು ಮುಂದಾಗಿದ್ದ. ತನ್ನ ಪ್ರಸ್ತಾಪವನ್ನು ತಿರಸ್ಕರಿಸಿದ ಹುಡುಗಿಯನ್ನು ಕೊಲೆ ಮಾಡುವುದಾಗಿ ಆರೋಪಿ ತನ್ನ ಸ್ನೇಹಿತರ ಬಳಿ ಹೇಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...