Monday, December 15, 2025
Monday, December 15, 2025

District Legal Services Authority ಲಿಂಗತ್ವ ಅಲ್ಪ ಸಂಖ್ಯಾತರು ಮತದಾನದ ಮೂಲಕ ದೇಶದ ಅಭಿವೃದ್ದಿಗೆ ಸಹಕರಿಸಬೇಕು- ಸ್ನೇಹಲ್ ಸುಧಾಕರ್ ಲೋಖಂಡೆ

Date:

District Legal Services Authority ಲಿಂಗತ್ವ ಅಲ್ಪಸಂಖ್ಯಾತರು ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಕರೆ ನೀಡಿದರು.

ಶಿವಮೊಗ್ಗ ನಗರದ ಡಿಎಆರ್ ಸಭಾಂಗಣದಲ್ಲಿ ನಡೆದ ಸ್ವೀಪ್ ಸಮಿತಿಯ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ರಕ್ಷ ಸಮುದಾಯ ಸಂಘ, ಅಭಯಧಾಮ, ಸಂಸ್ಥೆ, ಇವರ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ದಮನಿತ ಮಹಿಳೆಯರಿಗೆ ಡಿಎಆರ್ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಸ್ವೀಪ್ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

District Legal Services Authority ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನವನ್ನು ಮಾಡಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಲಾಸಲಾಗುತ್ತಿದ್ದು ಸಮಾಜದ ದಮನಿತರು ಮುಖ್ಯವಾಹಿನಿಗೆ ಬರಬೇಕು. ಲಿಂಗತ್ವ ಅಲ್ಪಸಂಖ್ಯಾತರು ಕೂಡ ಸಮಾಜದ ಒಂದು ಭಾಗ. ಲಿಂಗತ್ವ ಅಲ್ಪಸಂಖ್ಯಾತರು ಮತದಾರ ನೋಂದಣಿಯಲ್ಲಿ ಹಿಂದೆ ಉಳಿಯಬಾರದು. ಪ್ರತಿಯೊಬ್ಬರು ನೋಂದಣಿ ಮಾಡಿಕೊಳ್ಳಬೇಕು. ಸಮಾಜದಲ್ಲಿ ಪುರಷ, ಮಹಿಳೆಯರ ಜೊತೆಯಲ್ಲಿ ತೃತೀಯ ಲಿಂಗಿಗಳು ಅಭಿವೃದ್ಧಿಯಾಗಬೇಕು. ನಿಮ್ಮ ದ್ವನಿಯೂ ಕೂಡ ಸಂಸತ್ತಿನಲ್ಲಿ ಕೇಳಿಸಬೇಕು. ಅದಕ್ಕಾಗಿ ಎಲ್ಲ ಲಿಂಗತ್ವ ಅಲ್ಪಸಂಖ್ಯಾತರು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಮಾತನಾಡಿ, ಸಂವಿಧಾನ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಆದರೆ ನಾವು ನಮ್ಮ ಮೂಲಭೂತ ಕರ್ತವ್ಯಗಳನ್ನು ಮರೆಯಬಾರದು. ಮತದಾನ ನಮ್ಮ ಮೂಲಭೂತ ಕರ್ತವ್ಯವಾಗಿದೆ ಎಂದು ಭಾವಿಸಿ ಮತದಾನದಲ್ಲಿ ಭಾಗವಹಿಸಬೇಕು ಎಂದ ಅವರು ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಪಯಣ ಸಂಸ್ಥೆಯ ನಿರ್ದೇಶಕಿ ಚಾಂದಿನಿ ಮಾತನಾಡಿ, ತೃತೀಯ ಲಿಂಗ ಜನಾಂಗದವರು ಎಂದು ನಾವು ಮೊದಲು ಒಪ್ಪಿಕೊಳ್ಳಬೇಕು. ಸಮಾಜ ಕೂಡ ನಮ್ಮನ್ನು ಗೌರವಿಸಬೇಕು. ಮತದಾರರ ನೋಂದಣಿಯಲ್ಲಿ ತಮ್ಮ ಲಿಂಗ ನಮೂದಿಸಿಕೊಳ್ಳಲು ಹಿಂದೆ ಸರಿಯುತ್ತಿದ್ದು ಪುರಷ ಅಥವಾ ಮಹಿಳೆ ಎಂದು ಸೇರಿಕೊಳ್ಳುತ್ತಾರೆ. ತೃತೀಯ ಲಿಂಗ ಎಂದು ನಮೂದಿಸಲು ಯಾರೂ ಒಪ್ಪುವುದಿಲ್ಲ ಎಂದ ಅವರು ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಪೆÇ್ರೀತ್ಸಾಹ ನೀಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸ್ವೀಪ್ ಕಾರ್ಯಕ್ರಮದ ಕುರಿತು ರಾಜ್ಯಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೀಜ್ ಅವರು ಉಪನ್ಯಾಸ ಮತದಾನದ ಕುರಿತು ಜಾಗೃತಿ ಮೂಡಿಸಿದರು.

ನಂತರ ವಿವಿಧ ಕ್ರೀಡಾ ಚಟುವಟಿಗಳು, ಮತದಾನ ಜಾಗೃತಿ ಗೀತೆ ಹಾಗೂ ಅರಿವು ಮೂಡಿಸುವ ಕಾರ್ಯಾಗಾರವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಬಿ.ಕೃಷ್ಣಪ್ಪ, ಜಿಲ್ಲಾ ರಕ್ಷ ಸಮಿತಿ ಅಧ್ಯಕ್ಷರಾದ ಮೊಹಮ್ಮದ್ ಸೈಯದ್, ಅಭಯಧಾಮ ಸಂಸ್ಥೆಯ ಜಯಲಕ್ಷ್ಮಿ, ಸೇರಿದಂತೆ ಲಿಂಗತ್ವ ಅಲ್ಪಸಂಖ್ಯಾತರು ಜಿಲ್ಲಾ ಸ್ವೀಪ್ ಸಮಿತಿಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...