Tuesday, April 21, 2026
Tuesday, April 21, 2026

District Legal Services Authority ಲಿಂಗತ್ವ ಅಲ್ಪ ಸಂಖ್ಯಾತರು ಮತದಾನದ ಮೂಲಕ ದೇಶದ ಅಭಿವೃದ್ದಿಗೆ ಸಹಕರಿಸಬೇಕು- ಸ್ನೇಹಲ್ ಸುಧಾಕರ್ ಲೋಖಂಡೆ

Date:

District Legal Services Authority ಲಿಂಗತ್ವ ಅಲ್ಪಸಂಖ್ಯಾತರು ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಕರೆ ನೀಡಿದರು.

ಶಿವಮೊಗ್ಗ ನಗರದ ಡಿಎಆರ್ ಸಭಾಂಗಣದಲ್ಲಿ ನಡೆದ ಸ್ವೀಪ್ ಸಮಿತಿಯ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ರಕ್ಷ ಸಮುದಾಯ ಸಂಘ, ಅಭಯಧಾಮ, ಸಂಸ್ಥೆ, ಇವರ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ದಮನಿತ ಮಹಿಳೆಯರಿಗೆ ಡಿಎಆರ್ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಸ್ವೀಪ್ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

District Legal Services Authority ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನವನ್ನು ಮಾಡಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಲಾಸಲಾಗುತ್ತಿದ್ದು ಸಮಾಜದ ದಮನಿತರು ಮುಖ್ಯವಾಹಿನಿಗೆ ಬರಬೇಕು. ಲಿಂಗತ್ವ ಅಲ್ಪಸಂಖ್ಯಾತರು ಕೂಡ ಸಮಾಜದ ಒಂದು ಭಾಗ. ಲಿಂಗತ್ವ ಅಲ್ಪಸಂಖ್ಯಾತರು ಮತದಾರ ನೋಂದಣಿಯಲ್ಲಿ ಹಿಂದೆ ಉಳಿಯಬಾರದು. ಪ್ರತಿಯೊಬ್ಬರು ನೋಂದಣಿ ಮಾಡಿಕೊಳ್ಳಬೇಕು. ಸಮಾಜದಲ್ಲಿ ಪುರಷ, ಮಹಿಳೆಯರ ಜೊತೆಯಲ್ಲಿ ತೃತೀಯ ಲಿಂಗಿಗಳು ಅಭಿವೃದ್ಧಿಯಾಗಬೇಕು. ನಿಮ್ಮ ದ್ವನಿಯೂ ಕೂಡ ಸಂಸತ್ತಿನಲ್ಲಿ ಕೇಳಿಸಬೇಕು. ಅದಕ್ಕಾಗಿ ಎಲ್ಲ ಲಿಂಗತ್ವ ಅಲ್ಪಸಂಖ್ಯಾತರು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಮಾತನಾಡಿ, ಸಂವಿಧಾನ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಆದರೆ ನಾವು ನಮ್ಮ ಮೂಲಭೂತ ಕರ್ತವ್ಯಗಳನ್ನು ಮರೆಯಬಾರದು. ಮತದಾನ ನಮ್ಮ ಮೂಲಭೂತ ಕರ್ತವ್ಯವಾಗಿದೆ ಎಂದು ಭಾವಿಸಿ ಮತದಾನದಲ್ಲಿ ಭಾಗವಹಿಸಬೇಕು ಎಂದ ಅವರು ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಪಯಣ ಸಂಸ್ಥೆಯ ನಿರ್ದೇಶಕಿ ಚಾಂದಿನಿ ಮಾತನಾಡಿ, ತೃತೀಯ ಲಿಂಗ ಜನಾಂಗದವರು ಎಂದು ನಾವು ಮೊದಲು ಒಪ್ಪಿಕೊಳ್ಳಬೇಕು. ಸಮಾಜ ಕೂಡ ನಮ್ಮನ್ನು ಗೌರವಿಸಬೇಕು. ಮತದಾರರ ನೋಂದಣಿಯಲ್ಲಿ ತಮ್ಮ ಲಿಂಗ ನಮೂದಿಸಿಕೊಳ್ಳಲು ಹಿಂದೆ ಸರಿಯುತ್ತಿದ್ದು ಪುರಷ ಅಥವಾ ಮಹಿಳೆ ಎಂದು ಸೇರಿಕೊಳ್ಳುತ್ತಾರೆ. ತೃತೀಯ ಲಿಂಗ ಎಂದು ನಮೂದಿಸಲು ಯಾರೂ ಒಪ್ಪುವುದಿಲ್ಲ ಎಂದ ಅವರು ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಪೆÇ್ರೀತ್ಸಾಹ ನೀಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸ್ವೀಪ್ ಕಾರ್ಯಕ್ರಮದ ಕುರಿತು ರಾಜ್ಯಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೀಜ್ ಅವರು ಉಪನ್ಯಾಸ ಮತದಾನದ ಕುರಿತು ಜಾಗೃತಿ ಮೂಡಿಸಿದರು.

ನಂತರ ವಿವಿಧ ಕ್ರೀಡಾ ಚಟುವಟಿಗಳು, ಮತದಾನ ಜಾಗೃತಿ ಗೀತೆ ಹಾಗೂ ಅರಿವು ಮೂಡಿಸುವ ಕಾರ್ಯಾಗಾರವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಬಿ.ಕೃಷ್ಣಪ್ಪ, ಜಿಲ್ಲಾ ರಕ್ಷ ಸಮಿತಿ ಅಧ್ಯಕ್ಷರಾದ ಮೊಹಮ್ಮದ್ ಸೈಯದ್, ಅಭಯಧಾಮ ಸಂಸ್ಥೆಯ ಜಯಲಕ್ಷ್ಮಿ, ಸೇರಿದಂತೆ ಲಿಂಗತ್ವ ಅಲ್ಪಸಂಖ್ಯಾತರು ಜಿಲ್ಲಾ ಸ್ವೀಪ್ ಸಮಿತಿಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...