Saturday, September 28, 2024
Saturday, September 28, 2024

Congress Guarantee Scheme ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಈ ಬಾರಿ ಶಿವಮೊಗ್ಗ ಲೋಕಸಭಾ ಚುನಾವಣಾ ಅಭ್ಯರ್ಥಿಗೆ ಗೆಲುವು ತರಲಿದೆ

Date:

Congress Guarantee Scheme ಗಿಡವನ್ನು ಗೊಬ್ಬರ ನೀರು ಹಾಕಿ ಪೋಷಿಸುವಂತೆ ಕಾಂಗ್ರೆಸ್ ಸರ್ಕಾರ ಬಡವರನ್ನು, ದೀನದಲಿತರನ್ನು, ಹಿಂದುಳಿದ ವರ್ಗದವರನ್ನು, ಪರಿಶಿಷ್ಟರನ್ನು, ನೋಂದವರನ್ನು ಹಾಗೂ ಸಮಾಜದ ಎಲ್ಲರನ್ನೂ ಕಾಪಾಡುವ ಕೆಲಸ ಮಾಡುತ್ತಿದೆ. ಅದರಿಂದ ಪಸಲು ಅಂದರೆ ಲಾಭ ಖಂಡಿತ ಆಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಡಿಸಿ ಜಗದೀಶ್ವರ್ ತಿಳಿಸಿದರು.

ಅವರು ಪತ್ರಿಕಾ ಹೇಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ರೂಪದಲ್ಲಿ ನೊಂದವರಿಗೆ ನೆರವಾಗಿರುವುದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಈ ಅನುಕೂಲ ಪಡೆದವರು ನಿಜಕ್ಕೂ ಪಕ್ಷಕ್ಕೆ ಒಳಿತನ್ನು ಮಾಡುತ್ತಾರೆ ಎಂಬ ನಂಬಿಕೆ ನಿರೀಕ್ಷೆ ನಮಗಿದೆ, ನಿರೀಕ್ಷೆ ಸೋತರೆ, ನೀರು ಗೊಬ್ಬರ ಅತ್ಯಗತ್ಯವಾಗುತ್ತದೆಯೇ ಎಂದು ಪ್ರಶ್ನಿಸಿದರು.

Congress Guarantee Scheme ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ನಾಮಪತ್ರ ಸಲ್ಲಿಸುವಾಗ ಸೇರಿದ್ದ ಬಾರಿ ಪ್ರಮಾಣದ ಮತದಾರರ ಭವ್ಯ ಮೆರವಣಿಗೆಯನ್ನು ಕಂಡ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗೆ ಆತಂಕ ತಂದಿದೆ. ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಸಾಕಷ್ಟು ಬೆಂಬಲ ವ್ಯಕ್ತವಾಗಿದ್ದು, ಕಾಂಗ್ರೆಸ್ ಜಿಲ್ಲೆಯಲ್ಲಿ ಗೆಲ್ಲುವುದು ನೂರಕ್ಕೆ ನೂರು ಖಚಿತ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...