Wednesday, February 4, 2026
Wednesday, February 4, 2026

Belur Gopalakrishna ಗ್ಯಾರಂಟಿ ಯೋಜನೆ ಮಾಹಿತಿ ನೀಡಿ, ಮತದಾರರನ್ನ ಓಲೈಸಿ ಮತಯಾಚಿಸಿ- ಬೇಳೂರು ಗೋಪಾಲಕೃಷ್ಣ

Date:

Belur Gopalakrishna ಕಾಂಗ್ರೆಸ್ಸಿನ ಮಹಿಳಾ ಕಾರ್ಯಕರ್ತರು, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಪದಾಧಿಕಾರಿಗಳು ಹಾಗೂ ಬೂತ್ ಸಮಿತಿ ಪದಾಧಿಕಾರಿಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರವಾಗಿ ತಿಳಿಸಿ, ಜನರಿಗೆ ಮನವರಿಕೆ ಮಾಡಿ ಈ ಮೂಲಕ ಮತದಾರರನ್ನು ಓಲೈಸಿ ಮತ ಯಾಚಿಸಬೇಕೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಹಾಗೂ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು.

ಸಾಗರ ಪಟ್ಟಣದ ಕಾಂಗ್ರೆಸ್ ಕಚೇರಿ ಗಾಂಧಿ ಮಂದಿರದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಯೋಜನೆ ವಿವರಗಳನ್ನು ತಿಳಿಸಿ, ಜನರಿಗೆ ಇದನ್ನು ಅರ್ಥೈಸಿ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಮತ ಯಾಚನೆ ಮಾಡುವಂತೆ ತಿಳಿಹೇಳಿದರು.

Belur Gopalakrishna ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ, ಪಕ್ಷದ ಜಿಲ್ಲಾ ಹಾಗೂ ತಾಲ್ಲೂಕು ಮುಖಂಡರಾದ ಬಿ. ಆರ್. ಪ್ರಭಾಕರ್, ತಾಲ್ಲೂಕು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಮಾ ಸುಬ್ರಮಣ್ಯ, ಬಂಡಿ ರಾಮಚಂದ್ರ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ರಿಪ್ಪನ್‌ಪೇಟೆಯ ಫ್ಯಾನ್ಸಿ ರಮೇಶ್, ಹೆಚ್. ಡಿ. ಜಯಶೀಲಪ್ಪ, ಗುರುಶಕ್ತಿ ವಿದ್ಯಾಧರ, ಏರಿಗೆ ಉಮೇಶ್, ಡಿ.ಆರ್. ವಿನಯ್, ಬುಕ್ಕಿವರೆ ಮಹೇಂದ್ರ, ಎಂ.ಎ. ಪರಮೇಶ್, ರವಿ ನೇರಲೆ, ಸ್ವಾಮಿ ಈಶ್ವರಪ್ಪ ಗೌಡ, ಸಣ್ಣಕ್ಕಿ ಮಂಜು, ಜಯನಗರ ಗುರು, ನೇತ್ರಾವತಿ, ನೋರಾ ಮೆಟಲ್ಡ್ ಸಿಕ್ವೇರಾ, ಸಾಕಮ್ಮ, ಸಿಂಥಿಯಾ ಸೆರಾವೋ, ಶಾಹೀನಾ ಬೇಗಂ ಮೊದಲಾದ ಮುಖಂಡರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...