Saturday, December 6, 2025
Saturday, December 6, 2025

Dandeli Kali river ದಾಂಡೆಲಿಯ ಅಕ್ವಾಡ ಗ್ರಾಮದ ಕಾಳಿ ನದಿಯಲ್ಲಿ ಒಂದೇ ಕುಟುಂಬದ 6 ಮಂದಿ ಮುಳುಗಿ ಸಾವು

Date:

Dandeli Kali river ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿರುವಂತಹ ದಾರುಣ ಘಟನೆ ಸಂಭವಿಸಿದೆ.
ಮೃತರನ್ನು 40 ವರ್ಷದ ನಜೀರ್ ಅಹ್ಮದ್, 38 ವರ್ಷದ ರೇಷಾ ಉನ್ನಿಸಾ, 15 ವರ್ಷದ ಇಫ್ರಾ‌ ಅಹ್ಮದ್, 12 ವರ್ಷದ ಅಬೀದ್ ಅಹ್ಮದ್, 10 ವರ್ಷದ ಅಲ್ಛೀಯಾ ಅಹ್ಮದ್ ಮತ್ತು 6 ವರ್ಷದ ಮೋಹಿನ್ ಎಂದು ಗುರುತಿಸಲಾಗಿದೆ.
ಪ್ರವಾಸಕ್ಕೆ ತೆರಳಿದ್ದಾಗ ಅಹ್ಮದ್ ಕುಟುಂಬ ಊಟ ಮಾಡಿ ಕಾಳಿ ನದಿ ದಡದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿದೆ. ಆಗ ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ಮೃತರನ್ನು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ.
Dandeli Kali river ಪ್ರವಾಸಕ್ಕೆಂದು ಒಟ್ಟು 8 ಮಂದಿ ತಂಡ ತೆರಳಿತ್ತು. ಆ ಪೈಕಿ ಇಬ್ಬರು ಮಹಿಳೆಯರು ನೀರಿಗೆ ಇಳಿದಿರಲಿಲ್ಲ ಎನ್ನಲಾಗುತ್ತಿದೆ. ಸದ್ಯ ಕಾಳಿ ನದಿಯಿಂದ ಆರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...