Monday, February 16, 2026
Monday, February 16, 2026

Code of Conduct ಬಿಜೆಪಿ ರಾಜ್ಯ ಘಟಕಕ್ಕೆ ಸೇರಿದ್ದ ಕಾರಿಂದ ಕೋಟಿ ರೂ ಜಫ್ತಿ

Date:

Code of Conduct ಬಿಜೆಪಿ ರಾಜ್ಯ ಘಟಕಕ್ಕೆ ಸೇರಿದ್ದ ಕಾರಿಂದ ಕೋಟಿ ರೂ ಜಫ್ತಿ ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸುತ್ತಿದ್ದ 2 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿರುವ ಚುನಾವಣಾ ಅಕ್ರಮ ತಡೆ ತಂಡ, ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಲೋಕೇಶ್‌ ಅಂಬೆಕಲ್ಲು ಮತ್ತು ಇತರೆ ಇಬ್ಬರ ವಿರುದ್ಧ ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದೆ.
ಕಾಟನ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ತನಿಖಾ ಠಾಣೆಯಲ್ಲಿ ಶನಿವಾರ ಸಂಜೆ ಕಾರು ತಪಾಸಣೆ ನಡೆಸಿದಾಗ ರೂ. 2 ಕೋಟಿ ನಗದು ಪತ್ತೆಯಾಗಿತ್ತು. ಅದು ಬಿಜೆಪಿ ರಾಜ್ಯ ಘಟಕದ ಕಚೇರಿಗೆ ಸೇರಿದ್ದು ಎಂಬುದಾಗಿ ಕಾರಿನಲ್ಲಿದ್ದವರು ದಾಖಲೆ ಒದಗಿಸಿದ್ದರು. ಬಳಿಕ ಚುನಾವಣಾಧಿಕಾರಿಗಳು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಶಕ್ಕೆ ನಗದನ್ನು ನೀಡಿ, ಸೂಕ್ತ ಕ್ರಮ ಜರುಗಿಸುವಂತೆ ಕೋರಿದ್ದರು.
ಹಣವನ್ನು ಬ್ಯಾಂಕ್‌ನಿಂದ ನಗದೀಕರಿಸಿರುವ ದಾಖಲೆಗಳಿರುವ ಕಾರಣದಿಂದ ಆದಾಯ ತೆರಿಗೆ (ಐ.ಟಿ) ಕಾಯ್ದೆಯ ಉಲ್ಲಂಘನೆ ಆಗಿಲ್ಲ ಎಂದು ಐ.ಟಿ ಅಧಿಕಾರಿಗಳು ಚುನಾವಣಾಧಿಕಾರಿಗಳಿಗೆ ತಿಳಿಸಿದ್ದರು. ನಗದನ್ನೂ ವಾಪಸ್‌ ಚುನಾವಣಾಧಿಕಾರಿಗಳ ವಶಕ್ಕೆ ಮರಳಿಸಿದ್ದರು. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳನ್ನು ಉಲ್ಲಂಘಿಸಿ ನಗದು ಸಾಗಿಸುತ್ತಿದ್ದ ಆರೋಪದ ಮೇಲೆ ಇದೀಗ ನ್ಯಾಯಾಲಯದ Code of Conduct ಅನುಮತಿ ಪಡೆದು ಎಫ್‌ಐಆರ್‌ ದಾಖಲಿಸಿದ್ದಾರೆ.
ನಗದನ್ನು ಬ್ಯಾಂಕ್‌ನಿಂದ ಚೆಕ್‌ ಮೂಲಕ ಡ್ರಾ ಮಾಡಿದ್ದು, ಬಿಜೆಪಿ ಕಾರ್ಯಕರ್ತರಿಗೆ ನೀಡಲು ಕಳುಹಿಸಲಾಗುತ್ತಿದೆ ಎಂದು ಉಲ್ಲೇಖಿಸಿದ್ದ ಬಿಜೆಪಿ ರಾಜ್ಯ ಘಟಕದ ಕಾರ್ಯಾಲಯದ ಪತ್ರ ಕಾರಿನಲ್ಲಿತ್ತು. ಈ ಕುರಿತು ಐ.ಟಿ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಆದಾಯ ತೆರಿಗೆ ವಂಚನೆ ಆಗಿಲ್ಲ ಎಂಬುದು ಕಂಡುಬಂದಿತ್ತು’ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...