Sunday, December 14, 2025
Sunday, December 14, 2025

K.S.Eshwarappa ನನ್ನ ಉಚ್ಚಾಟನೆ ತಾತ್ಕಾಲಿಕ,ನನಗೆ ಬಿಜೆಪಿ ತಾಯಿ ಇದ್ದಂತೆ- ಈಶ್ವರಪ್ಪ

Date:

K.S.Eshwarappa ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಇನ್ನೂ ಎಳಸು. ಆತನಿಗೆ ಪಕ್ಷದ ಬಗ್ಗೆ ಅರಿವಿಲ್ಲ. ಅವನು ಅಪ್ಪನ ನೆರಳಲ್ಲಿ ಬಂದವನು. ಪ್ರಭಾವದಿಂದ, ಹಠ ಮಾಡಿ ಪಟ್ಟ ಪಡೆದಿದ್ದಾನೆ. ಆತ ನನ್ನನ್ನು ಉಚ್ಛಾಟಿಸಿದ್ದಾನೆ. ಆದರೆ ನನ್ನ ಉಚ್ಚಾಟನೆ ತಾತ್ಕಾಲಿಕ, ನನಗೆ ಬಿಜೆಪಿಗೆ ತಾಯಿ ಇದ್ದಂತೆ ಎಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವರು ನನಗೆ ಕರೆ ಮಾಡಿ ಪಕ್ಷದಿಂದ ಹೊರಹಾಕಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅನ್ಯಾಯವಾಗಿದೆ ಎಂದು ಕಾರ್ಯಕರ್ತರು ಹೇಳಿದ್ದಾರೆ.

ಅಪ್ಪ-ಮಕ್ಕಳಿಂದ ಹಾಗೂ ಹಿಂದುತ್ವಕ್ಕೆ ಅನ್ಯಾಯವಾಗಿದೆ. ಹೀಗಾಗಿ ಬೂತ್‌ನಲ್ಲ್ಲಿ ಇದಕ್ಕೆ ಉತ್ತರ ಕೊಡುತ್ತೇವೆ ಎನ್ನುತ್ತಿದ್ದಾರೆ ಎಂದರು. ನಾನು ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ. ಮತ್ತೆ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ. ಇಲ್ಲಿ ರಾಘವೇಂದ್ರ ಸೋತು ಮನೆಗೆ ಮನೆಗೆ ಹೋಗುತ್ತಾರೆ. ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರೆ. ಅಪ್ಪ-ಮಕ್ಕಳ ಕೈಯಿಂದ ಪಕ್ಷ ತಪ್ಪುತ್ತದೆ, ಶುದ್ಧೀಕರಣವಾಗುತ್ತದೆ ಎಂದರು.

K.S.Eshwarappa ಬಿಜೆಪಿಯಿಂದ ನನ್ನ ಉಚ್ಚಾಟನೆ ಬಳಿಕ ನನ್ನ ಸ್ಪರ್ಧೆ ಬಗ್ಗೆ ಎಲ್ಲರಿಗೂ ಸ್ಪಷ್ಟನೆ ಸಿಕ್ಕಿದೆ. ಇದಕ್ಕಾಗಿ ವಿಜಯೇಂದ್ರ ಧನ್ಯವಾದ ತಿಳಿಸುತ್ತೇನೆ. ದಿನೇ ದಿನೇ ನನಗೆ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿದೆ ಎಂದ ಅವರು, ವಿಜಯೇಂದ್ರ, ರಾಘವೇಂದ್ರ ಈಶ್ವರಪ್ಪ ವಾಪಸ್ ಪಡೆಯುತ್ತಾರೆ ಎಂದು ಪದೇ ಪದೇ ಹೇಳುತ್ತಾ, ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿದ್ದರು.

ಈಗ ಪಕ್ಷದಿಂದ ಉಚ್ಚಾಟನೆ ಆಗಿದೆ. ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ ಎಂಬುದಕ್ಕೆ ಈಗ ಸ್ಪಷ್ಟನೆ ಸಿಕ್ಕಿದೆ ಎಂಧರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...