Monday, December 15, 2025
Monday, December 15, 2025

Holehonur Police ಹೊಳೆ ಹೊನ್ನೂರಿನ ಬಳಿ ಭದ್ರಾ ಚಾನಲ್ ನಲ್ಲಿ ಮುಳುಗಿ ಇಬ್ಬರ ಬಾಲಕರ ಸಾವು

Date:

Holehonur Police ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ವೇಳೆ ಹೀಗಾಗಿದೆ ಎಂದು ತಿಳಿದು ಬಂದಿದೆ.

ನಡೆದಿದ್ದೇನು?

ಹೊಳೆಹೊನ್ನೂರು ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ರಜತ್‌ ಹಾಗೂ ರೋಹನ್‌ ಎಂದು ಗುರುತಿಸಲಾಗಿದೆ. 15 ವರ್ಷ ಹಾಗೂ 10 ವರ್ಷದ ಬಾಲಕರಿಬ್ಬರು ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದರು. ನಿನ್ನೆ ಸಂಜೆ ಮೂರುವರೆ ನಾಲ್ಕು ಗಂಟೆ ಸುಮಾರಿಗೆ ಇಬ್ಬರು ಭದ್ರಾ ಚಾನಲ್‌ ಬಳಿ ಬಂದಿದ್ದಾರೆ.

Holehonur Police ಚಾನಲ್‌ ಏರಿ ಮೇಲೆ ಬಂದ ಇಬ್ಬರು ಬಾಲಕರ ಪೈಕಿ ಚಿಕ್ಕವನು ನೀರಿಗಿಳಿದಿದ್ದಾನೆ. ಆದರೆ ನೀರಿನ ಸೆಲೆಯಲ್ಲಿ ಆತ ಈಜಲಾಗದೇ ಮುಳಗಲು ಆರಂಭಿಸಿದ್ದಾನೆ. ಆತನನ್ನು ರಕ್ಷಿಸಲು ಇನ್ನೊಬ್ಬನು ನೀರಿಗಿಳಿದಿದ್ದು, ಆತನೂ ಸಹ ಚಾನಲ್‌ನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಲೇ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಸ್ಥಳದಲ್ಲಿ ಬಟ್ಟೆ ಮಾತ್ರ ಪತ್ತೆಯಾಗಿದ್ದರಿಂದ ಪ್ರಕರಣ ಅನುಮಾನ ಸಹ ಮೂಡಿಸಿತ್ತು. ಆನಂತರ ರಾತ್ರಿ 9.30 ರ ಸುಮಾರಿಗೆ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವ ಮಹಜರ್‌ ನಡೆಸಿ ಪೋಷಕರಿಗೆ ಬಾಲಕರ ಮೃತದೇಹವನ್ನು ಒಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...