Friday, March 27, 2026
Friday, March 27, 2026

Holehonur Police ಹೊಳೆ ಹೊನ್ನೂರಿನ ಬಳಿ ಭದ್ರಾ ಚಾನಲ್ ನಲ್ಲಿ ಮುಳುಗಿ ಇಬ್ಬರ ಬಾಲಕರ ಸಾವು

Date:

Holehonur Police ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ವೇಳೆ ಹೀಗಾಗಿದೆ ಎಂದು ತಿಳಿದು ಬಂದಿದೆ.

ನಡೆದಿದ್ದೇನು?

ಹೊಳೆಹೊನ್ನೂರು ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ರಜತ್‌ ಹಾಗೂ ರೋಹನ್‌ ಎಂದು ಗುರುತಿಸಲಾಗಿದೆ. 15 ವರ್ಷ ಹಾಗೂ 10 ವರ್ಷದ ಬಾಲಕರಿಬ್ಬರು ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದರು. ನಿನ್ನೆ ಸಂಜೆ ಮೂರುವರೆ ನಾಲ್ಕು ಗಂಟೆ ಸುಮಾರಿಗೆ ಇಬ್ಬರು ಭದ್ರಾ ಚಾನಲ್‌ ಬಳಿ ಬಂದಿದ್ದಾರೆ.

Holehonur Police ಚಾನಲ್‌ ಏರಿ ಮೇಲೆ ಬಂದ ಇಬ್ಬರು ಬಾಲಕರ ಪೈಕಿ ಚಿಕ್ಕವನು ನೀರಿಗಿಳಿದಿದ್ದಾನೆ. ಆದರೆ ನೀರಿನ ಸೆಲೆಯಲ್ಲಿ ಆತ ಈಜಲಾಗದೇ ಮುಳಗಲು ಆರಂಭಿಸಿದ್ದಾನೆ. ಆತನನ್ನು ರಕ್ಷಿಸಲು ಇನ್ನೊಬ್ಬನು ನೀರಿಗಿಳಿದಿದ್ದು, ಆತನೂ ಸಹ ಚಾನಲ್‌ನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಲೇ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಸ್ಥಳದಲ್ಲಿ ಬಟ್ಟೆ ಮಾತ್ರ ಪತ್ತೆಯಾಗಿದ್ದರಿಂದ ಪ್ರಕರಣ ಅನುಮಾನ ಸಹ ಮೂಡಿಸಿತ್ತು. ಆನಂತರ ರಾತ್ರಿ 9.30 ರ ಸುಮಾರಿಗೆ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವ ಮಹಜರ್‌ ನಡೆಸಿ ಪೋಷಕರಿಗೆ ಬಾಲಕರ ಮೃತದೇಹವನ್ನು ಒಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...