Friday, March 20, 2026
Friday, March 20, 2026

Shimoga Radio ಪ್ರಸ್ತುತ ಭೂಮಿ ವರ್ಸಸ್ ಪ್ಲಾಸ್ಟಿಕ್ ಯುದ್ಧವಿದೆ. ಭೂಮಿ ಕಬಳಿಸುವ ಭಸ್ಮಾಸುರ,ಪ್ಲಾಸ್ಟಿಕ್- ಪಾಂಡುರಂಗ ಹೆಗ್ಗಡೆ

Date:

Shimoga Radio ಇಂದಿನ ದಿನಮಾನಗಳಲ್ಲಿ ಸಮುದಾಯ ಎನ್ನುವ ಶಬ್ದವೇ ಕಳೆದುಹೋಗಿದೆ. ಇದರ ಮೂಲ ತತ್ವ ಕಾಣೆಯಾಗಿದೆ. ಮಾರುಕಟ್ಟೆಯ ಆಕರ್ಷಣೆಯು ವ್ಯಕ್ತಿ ಕೇಂದ್ರಿತ ಜೀವನಕ್ಕೆ ನಾಂದಿಯಾಗುತ್ತದೆ ಮತ್ತು ಕೊಳ್ಳುಬಾಕ ಸಂಸ್ಕೃತಿಗೆ ನಾಂದಿಯಾಗುತ್ತದೆ ಎಂದು ಪರಿಸರ ಹೋರಾಟಗಾರ ಪಾಂಡುರಂಗ ಹೆಗಡೆ ಅಭಿಪ್ರ‍್ರಾಯಪಟ್ಟರು.
ಶಿವಮೊಗ್ಗ ನಗರದ ಶಿವಮೊಗ್ಗ ರೇಡಿಯೋ ಸಂಸ್ಥೆೆಯ ಎರಡನೆಯ ವಾರ್ಷಿಕೋತ್ಸವ ಮತ್ತು ವಿಶ್ವ ಭೂ ದಿನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ಸಂಸ್ಥೆಯೊಂದು ಎಫ್ ಎಂ ರೇಡಿಯೋ ಆರಂಭಿಸಿ ಯಶಸ್ವಿಯಾಗಿದ್ದು ದೇಶದಲ್ಲಿ ಇದೇ ಮೊದಲು. ಯಾವುದೇ ಹಣದ ಬೆಂಬಲವಿಲ್ಲದೆ ಭಗೀರಥ ಪ್ರಯತ್ನದಿಂದ ಸಾಧನೆ ಮಾಡಿ ಗೆದ್ದಿದೆ. ಜನರ ವಿಶ್ವಾಸ ಗಳಿಸುವ ಮೂಲಕ ಸಮುದಾದಯದ ವಿಘಟನೆಯನ್ನು ತಡೆಯಬೇಕಿದೆ ಎಂದರು.
ಪ್ರಸ್ತುತ ಭೂಮಿ ವರ್ಸಸ್ ಪ್ಲಾಸ್ಟಿಕ್ ನಡುವೆ ಯುದ್ಧವಿದೆ. ಪ್ಲಾಸ್ಟಿಕ್ ಭೂಮಿ ಕಬಳಿಸುವ ಭಸ್ಮಾಸುರನಾಗಿದ್ದಾನೆ. ೨೦೧೮ರಲ್ಲಿ ಪ್ರಧಾನಿಯವರು ೨೦೨೨ರ ವೇಳೆ ಪ್ಲಾಸ್ಟಿಕ್ ಸಂಪೂರ್ಣ ನಿಷಿದ್ಧ ಎಂದಿದ್ದರು. ಆದರೆ ಇಂದು ಪರಿಸ್ಥಿತಿ ಏನಾಗಿದೆ ಎಂದು ಪಶ್ನಿಸಿದ ಅವರು, ಆಫ್ರಿಕಾದ ಉಗಾಂಡಾ ಎನ್ನುವ ಅತಿ ಚಿಕ್ಕ ದೇಶ ೨೦೦೮ರಿಂದ ಪ್ಲಾಸ್ಟಿಕ್‌ನ್ನು ಸಂಪೂರ್ಣ ನಿಷೇಧಿಸಿ ಜಗತ್ತಿಗೆ ಮಾದರಿಯಾಗಿದೆ. ಅಲ್ಲಿ ಪ್ಲಾಸ್ಟಿಕ್ ಬಳಸಿದರೆ ಅಥವಾ ಮಾರಾಟ ಮಾಡಿದರೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ೫ ಸಾವಿರ ಡಾಲರ್ ದಂಡ ತೆರಬೇಕಾಗುತ್ತದೆ ಎನ್ನುವುದನ್ನು ವಿವರಿಸಿದರು.
Shimoga Radio ಬಹುರಾಷ್ಟ್ರೀಯ ಕಂಪನಿಗಳು ಅಲ್ಲಿ ನಿಷೇಧದ ಯತ್ನ ವಿಫಲಗೊಳಿಸಲು ಸಾಕಷ್ಟು ಯತ್ನ ನಡೆಸಿದವು. ಆದರೆ ಯಶಸ್ವಿಯಾಗಲಿಲ್ಲ. ಪ್ಲಾಸ್ಟಿಕ್ ನಿಷೇಧಿಸಿದರೆ ಭೂಮಿತಾಯಿಯನ್ನು ಉಳಿಸಿಕೊಳ್ಳಬಹುದು. ಈಗ ಪ್ಲಾಸ್ಟಿಕ್ ಭೂಮಿಗೆ ಮಾರಕವಾಗಿದೆ. ನಮ್ಮ ಹೃದಯದಿಂದ ಪ್ಲಾಸ್ಟಿಕ್ ನಿಷೇಧವನ್ನು ಕಾರ್ಯರೂಪಕ್ಕೆ ತರಬೇಕಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...