Friday, March 20, 2026
Friday, March 20, 2026

Karnataka Lokayukta ಲಂಚ ಸ್ವೀಕಾರ ಪ್ರಕರಣ. ಲೋಕಾಯುಕ್ತ ಬಲೆಗೆ ಬಿದ್ದ ಅಬ್ಬಲಗೆರೆ ಗ್ರಾಪಂ ಕಾರ್ಯದರ್ಶಿ ಯೋಗೀಶ್

Date:

Karnataka Lokayukta ಖಾತೆ ಬದಲಾವಣೆಗಾಗಿ ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾಮಪಂಚಾಯ್ತಿ ಕಾರ್ಯದರ್ಶಿ-2 ಯೋಗೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಆತನನ್ನು ಬಂಧಿಸಲಾಗಿದೆ.

ಯಶವಂತ ಎಂಬುವವರು ಚನ್ನಾಮುಂಬಾಪುರದಲ್ಲಿನ ಸೂಡಾ ಅನುಮೋದಿತ ಅಲಿನೇಷನ್ ಜಾಗವನ್ನು ಸೂಕ್ತ ದಾಖಲೆಗಳೊಂದಿಗೆ ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಅಬ್ಬಲಗೆರೆ ಗ್ರಾಮಪಂಚಾಯ್ತಿಗೆ ಅರ್ಜಿ ಸಲ್ಲಿಸಿದ್ದರು.

ಆದರೆ ಇದಕ್ಕಾಗಿ ಗ್ರಾಮಪಂಚಾಯ್ತಿ ಕಾರ್ಯದರ್ಶಿ ಯೊಗೀಶ್ 15 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದನ್ನೆನ್ನಲಾಗಿದೆ.

Karnataka Lokayukta ಈ ಬಗ್ಗೆ ಯೋಗೀಶ್ ಲೋಕಾಯುಕ್ತರಿಗೆ ದೂರು ನೀಡಿದ್ದು, ಅದರಂತೆ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ಎಂ.ಎಚ್ ಹಾಗೂ ಡಿವೈಎಸ್ಪಿ ಉಮೇಶ್ವರ್ ಈಶ್ವರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ವೀರಬಸಪ್ಪ ಎಲ್ ಮತ್ತು ಸಿಬ್ಬಂದಿ ದೂರುದಾರ ಯಶವಂತ್ ಅವರಿಂದ 15 ಸಾವಿರ ರೂ ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾ.ಪಂ ಕಾರ್ಯದರ್ಶಿ ಯೋಗೀಶ್ ನನ್ನು ಲಂಚದ ಹಣದ ಸಮೇತ ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...