Saturday, June 20, 2026
Saturday, June 20, 2026

Karnataka Lokayukta ಲಂಚ ಸ್ವೀಕಾರ ಪ್ರಕರಣ. ಲೋಕಾಯುಕ್ತ ಬಲೆಗೆ ಬಿದ್ದ ಅಬ್ಬಲಗೆರೆ ಗ್ರಾಪಂ ಕಾರ್ಯದರ್ಶಿ ಯೋಗೀಶ್

Date:

Karnataka Lokayukta ಖಾತೆ ಬದಲಾವಣೆಗಾಗಿ ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾಮಪಂಚಾಯ್ತಿ ಕಾರ್ಯದರ್ಶಿ-2 ಯೋಗೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಆತನನ್ನು ಬಂಧಿಸಲಾಗಿದೆ.

ಯಶವಂತ ಎಂಬುವವರು ಚನ್ನಾಮುಂಬಾಪುರದಲ್ಲಿನ ಸೂಡಾ ಅನುಮೋದಿತ ಅಲಿನೇಷನ್ ಜಾಗವನ್ನು ಸೂಕ್ತ ದಾಖಲೆಗಳೊಂದಿಗೆ ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಅಬ್ಬಲಗೆರೆ ಗ್ರಾಮಪಂಚಾಯ್ತಿಗೆ ಅರ್ಜಿ ಸಲ್ಲಿಸಿದ್ದರು.

ಆದರೆ ಇದಕ್ಕಾಗಿ ಗ್ರಾಮಪಂಚಾಯ್ತಿ ಕಾರ್ಯದರ್ಶಿ ಯೊಗೀಶ್ 15 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದನ್ನೆನ್ನಲಾಗಿದೆ.

Karnataka Lokayukta ಈ ಬಗ್ಗೆ ಯೋಗೀಶ್ ಲೋಕಾಯುಕ್ತರಿಗೆ ದೂರು ನೀಡಿದ್ದು, ಅದರಂತೆ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ಎಂ.ಎಚ್ ಹಾಗೂ ಡಿವೈಎಸ್ಪಿ ಉಮೇಶ್ವರ್ ಈಶ್ವರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ವೀರಬಸಪ್ಪ ಎಲ್ ಮತ್ತು ಸಿಬ್ಬಂದಿ ದೂರುದಾರ ಯಶವಂತ್ ಅವರಿಂದ 15 ಸಾವಿರ ರೂ ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾ.ಪಂ ಕಾರ್ಯದರ್ಶಿ ಯೋಗೀಶ್ ನನ್ನು ಲಂಚದ ಹಣದ ಸಮೇತ ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...