Friday, June 19, 2026
Friday, June 19, 2026

B.Y.Raghavendra ವಕೀಲರನ್ನ ಭೇಟಿ ಮಾಡಿ ಮತಯಾಚಿಸಿದ ಬಿ.ವೈ.ರಾಘವೇಂದ್ರ

Date:

B.Y.Raghavendra ವಕೀಲರ ಸ್ಪಂದನೆಯಿಂದ ನನ್ನ ಗೆಲುವಿನ ವಿಶ್ವಾಸ ಇನ್ನೂ ಹೆಚ್ಚಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ನಗರದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ ನೀಡಿ ವಕೀಲರ ಮತಯಾಚನೆ ಮಾಡಿ, ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಮಟ್ಟದ ವಿಚಾರಗಳು ಬಂದಾಗ ವಕೀಲರು ತಮ್ಮದೇ ಆದ ರೀತಿಯಲ್ಲಿ ಶಕ್ತಿ ಮೀರಿ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಎಂದರು.

B.Y.Raghavendra ವಕೀಲರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅನೇಕ ಸಲಹೆ ಸೂಚನೆಗಳನ್ನು ಕೊಟ್ಟಿದ್ದಾರೆ. ಅದೆಲ್ಲವನ್ನು ಉತ್ತಮ ರೀತಿಯಲ್ಲಿ ಪರಿಗಣಿಸಲಾಗುವುದು. ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿಸಲು ಹಾಗೂ ಉತ್ತಮ ನ್ಯಾಯಾಲಯ ಕ್ಯಾಂಪಸ್‌ನ್ನು ನಿರ್ಮಿಸುವ ಬಗ್ಗೆಯೂ ಸಹ ವಕೀಲರಿಂದ ಸೂಚನೆ ಬಂದಿದೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಬಸಪ್ಪ ಗೌಡ ಸೇರಿದಂತೆ ಅನೇಕ ವಕೀಲರುಗಳು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...