Thursday, June 18, 2026
Thursday, June 18, 2026

B.Y.Raghavendra ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ- ಬಿ.ವೈ.ರಾಘವೇಂದ್ರ

Date:

B.Y.Raghavendra ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆಯಿದ್ದು, ಇದರ ಪರಿಣಾಮವಾಗಿ ಬಿಜೆಪಿ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಬಿಜೆಪಿ ನಗರ ಮಂಡಲ ವತಿಯಿಂದ ನಗರದ ಸೋಮಿನಕೊಪ್ಪ ರಸ್ತೆಯಲ್ಲಿರುವ ಶಾರದಮ್ಮ ಬಡಾವಣೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರೆಂಟಿಗಳು ರಾಜ್ಯದ ಎಲ್ಲಾ ಜನರಿಗೆ ತಲುಪುವಲ್ಲಿ ವಿಫಲವಾಗಿದೆ. ಇದು ಮೂಗಿಗೆ ತುಪ್ಪ ಸವರುವಂತಹ ಕೆಲಸವಾಗಿದೆ. ರಾಜ್ಯದ ಪ್ರಜ್ಞಾವಂತ ಮತದಾರರು ಇದನ್ನು ಗಮನಿಸುತ್ತಿದ್ದಾರೆ. ಬಿಜೆಪಿಗೆ ಹೆಚ್ಚಿನ ಬೆಂಬಲವನ್ನು ನೀಡಲಿದ್ದಾರೆ ಎಂದು ಹೇಳಿದರು.
ಈ ಚುನಾವಣೆ ರಾಷ್ಟ್ರೀಯ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ನಡೆಯುತ್ತಿರುವ ಚುನಾವಣೆಯಾಗಿದೆ. ಯಾವುದೇ ಕುಟುಂಬದ ವಿಷಯ, ವ್ಯಕ್ತಿಗಳ ವಿಷಯ, ಹಾಗೂ ಟೀಕೆ ಟಿಪ್ಪಣಿಗಳಿಗೆ ಮತದಾರರು ತಲೆ ಕೆಡಿಸಿಕೊಳ್ಳುವುದಿಲ್ಲ, ರಾಷ್ಟ್ರದ ರಕ್ಷಣೆ ಹಾಗೂ ಪ್ರತಿಯೊಬ್ಬ ಪ್ರಜೆಯ ರಕ್ಷಣೆಯನ್ನು ಮಾಡುವಂತಹ ಸರ್ಕಾರವನ್ನು ಆಯ್ಕೆ ಮಾಡಬೇಕೆಂಬುದು ಪ್ರತಿಯೊಬ್ಬ ಭಾರತೀಯನ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಇದಕ್ಕೆ ಯಾವುದೇ ಸಂಶಯವಿಲ್ಲ ಎಂದರು.
B.Y.Raghavendra ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಕಾರ್ಪೋರೇಟರ್‌ಗಳಾದ ಆಶಾ ಚಂದ್ರ ಪ್ಪ, ಬೊಮ್ಮನಕಟ್ಟೆ ಮಾಲತೇಶ್, ಇನ್ನಿತರರ ಸಹಕಾರದಿಂದಾಗಿ ಬೊಮ್ಮನಕಟ್ಟೆ ಭಾಗದಲ್ಲಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸುವಂತಹ ಕೆಲಸ ಯಶಸ್ವಿಯಾಗಿದೆ ಎಂದರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಮೋಹನ್‌ರೆಡ್ಡಿ, ನಾಗರಾಜ್, ಸೋಮಶೇಖರ್ ಮತ್ತಿರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...