Monday, December 15, 2025
Monday, December 15, 2025

Lok Sabha Election ಬಿಜೆಪಿ,ಕಾಂಗ್ರೆಸ್ ಬಗ್ಗೆ ‘ಗರಂ’ ಹೇಳಿಕೆ ನೀಡಿರುವ ಜನಚೈತನ್ಯ ಕರ್ನಾಟಕ ಸಂಘಟನೆ

Date:

Lok Sabha Election ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಪ್ರಶ್ನಿಸಿ ಪ್ರಜಾತಂತ್ರ ಉಳಿಸಬೇಕೆಂದು ಜನ ಚೈತನ್ಯ ಕರ್ನಾಟಕ ಸಂಘಟನೆಯ ಜಿಲ್ಲಾ ಶಾಖೆ ಕರೆ ನೀಡಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಪದಾಧಿಕಾರಿಗಳು, ಸ್ವಾತಂತ್ರ್ಯ ಬಂದು 77 ವರ್ಷಗಳು ಗತಿಸಿದರೂ ದೇಶದ ಬಡಜನರ, ದಲಿತರ , ಹಿಂದುಳಿದವರಿಗೆ ನ್ಯಾಯ ಸಿಕ್ಕಿಲ್ಲ. ಬಿಜೆಪಿ ಸರಕಾರ ಸುಳ್ಳು ಪ್ರಚಾರ ಮಾಡಿಕೊಂಡು ಬಂದಿದೆ. ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತ ಯುವಜನರನ್ನು ಧರ್ಮದ ಬಲೆಯಲ್ಲಿ ಸಿಲುಕಿಸಿ ಮತರಾಜಕಾರಣ ಮಾಡಲಾಗುತ್ತಿದೆ.

ಸಂವಿಧಾನವನ್ನು ಬದಲಾಯಿಸುವ ಮಾತನ್ನು ಆಡುತ್ತಿರುವ ಬಿಜೆಪಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ.
ಕೋಮುವಾದ ಹಿಂದುತ್ವ ವಿಚಾರ ಹೊರತುಪಡಿಸಿದರೆ, ಬಿಜೆಪಿಗಿಂತ ಕಾಂಗ್ರೆಸ್ ಭಿನ್ನವಾಗಿಲ್ಲ. ಮತದಾರರು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಸಮಸ್ಯೆಗಳ ಕುರಿತು ಅಭ್ಯರ್ಥಿಗಳಿಗೆ ಪ್ರಶ್ನೆ ಮಾಡಬೇಕಿದೆ.

Lok Sabha Election ಮಲೆನಾಡಿನಲ್ಲಿ ಅರಣ್ಯ ಒತ್ತುವರಿ ಸಮಸ್ಯೆ ಇತ್ಯರ್ಥವಾಗಿಲ್ಲ. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರವಿಲ್ಲ. ಸಾವಿರಾರು ಎಕರೆ ಅರಣ್ಯದಲ್ಲಿ ಅಕೇಶಿಯಾ , ನೀಲಗಿರಿ ಬೆಳೆಸಲು ಲೀಜ್ ಪಡೆದಿದ್ದ ಭೂಮಿಯನ್ನು ವಾಪಸ್ ಕೊಡಬೇಕು.ಭದ್ರಾವತಿಯ ಎರಡೂ ಕಾರ್ಖಾನೆಗಳನ್ನು ಪುನರಾರಂಭಿಸಬೇಕು. ಮಲೆನಾಡಿನಿಂದ ದೂರದ ನಗರಗಳಿಗೆ ನೀರು ಕೊಂಡೊಯ್ಯುವ ಯೋಜನೆ ಕೈ ಬಿಡಬೇಕು. ಅರಣ್ಯವಾಸಿಗಳ ಹಿತ ಕಾಪಾಡಬೇಕು.ನಿರುದ್ಯೋಗ ನಿವಾರಣೆಗೆ ಕೈಗಾರಿಕೆ ತರಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ಪಡೆದು ಮತದಾನ ಮಾಡಬೇಕೆಂದು ಜನ ಚೈತನ್ಯ ಕರ್ನಾಟಕದ ಪದಾಧಿಕಾರಿಗಳಾದ ಪ್ರಕಾಶ್, ದೇಶಾದ್ರಿ ಹೊಸ್ಮನೆ,ಭಾಸ್ಕರ್ ಟಿ.ಪಿ. ಶೇಖರನಾಯ್ಕ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...