Thursday, March 19, 2026
Thursday, March 19, 2026

Lok Sabha Election ಮತದಾನ ಬಹಿಷ್ಕರಿಸಿ ನಿರ್ಧಾರ ತಿಳಿಸಿದ ‌ಹೊಸನಗರ ತಾಲ್ಲೂಕಿನ ಕುಂಭತ್ತಿ ಗ್ರಾಮಸ್ಥರು

Date:

Lok Sabha Election ಹೊಸನಗರ ತಾಲ್ಲೂಕಿನ ನಗರ ಹೋಬಳಿ ಕುಂಭತ್ತಿ ಗ್ರಾಮದ ಸ.ನಂ.5ರಲ್ಲಿ ಇಬ್ಬರು ಜಂಟಿಯಾಗಿ ನಡೆಸುತ್ತಿರುವ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರಿಗೆ ಪ್ರತೀದಿನವೂ ಒಂದಲ್ಲ ಒಂದು ಸಮಸ್ಯೆಯಾಗುತ್ತಿದ್ದು, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವಂತಹ ಸ್ಥಿತಿ ಬಂದಿದೆ.

ಈ ಬಗ್ಗೆ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳಿಗೆ ದೂರು ಕೊಟ್ಟರೂ ಈವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನದಿಂದ ದೂರವೇ ಉಳಿದು ಚುನಾವಣೆ ಬಹಿಷ್ಕರಿಸುವುದಾಗಿ ನಿರ್ಧರಿಸಿರುವ ಕುಂಭತ್ತಿ ಗ್ರಾಮಸ್ಥರು ತಹಶೀಲ್ದಾರ್ ಮೂಲಕ ಇಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.

Lok Sabha Election ಕಾರಣಗಿರಿಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಗಣಿಗಾರಿಕೆಯನ್ನು ವಿರೋಧಿಸಿ ಸಾಮೂಹಿಕ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಗಣಿಗಾರಿಕೆ ವಿರೋಧಿ ಭಿತ್ತಿಪತ್ರಗಳನ್ನು ಹಿಡಿದು ಗಣಿಗಾರಿಕೆಯ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೇ, ತಮಗೆ ನ್ಯಾಯ ದೊರೆಯುವವರೆಗೂ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...