Monday, December 15, 2025
Monday, December 15, 2025

Karnataka State Commission for Women ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಅಶ್ಲೀಲ ಚಿತ್ರಗಳ ಪೆನ್ ಡ್ರೈವ್ ಪ್ರಕರಣದ ಬಗ್ಗೆ ತನಿಖೆ

Date:

Karnataka State Commission for Women ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

“ಹಾಸನ ಜಿಲ್ಲೆಯಲ್ಲಿ ಪೆನ್‌ಡ್ರೈವ್ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಹಲವು ಮಹಿಳೆಯರನ್ನು ಬಲವಂತದಿಂದ ಲೈಂಗಿಕ ಕ್ರಿಯೆಗೆ ಒತ್ತಾಯಪಡಿಸುವ ಮೂಲಕ ಚಿತ್ರೀಕರಿಸಲಾಗಿದೆ ಎನ್ನಲಾಗುತ್ತಿದ್ದು, ಚಿತ್ರೀಕರಣ ಮಾಡಿದ ವ್ಯಕ್ತಿ ಮತ್ತು ಅದನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಯನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಮಾನಹಾನಿ ಉಂಟು ಮಾಡಿದವರನ್ನು ಶೀಘ್ರವಾಗಿ ಪತ್ತೆ ಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು ಮತ್ತು ಮಹಿಳೆಯರ ಮೇಲೆ ನೀಚ ಕೃತ್ಯವೆಸಗಿರುವವರ ವಿರುದ್ದ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳವಂತೆ ಕೋರುತ್ತೇನೆ” ಎಂದು ನಾಗಲಕ್ಷೀ ಚೌದರಿ ಅವರು ಪತ್ರದಲ್ಲಿ ಹೇಳಿದ್ದಾರೆ.

ಹಾಸನದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೋರಿ ಹಲವು ಸಂಘಟನೆಗಳು ಮಹಿಳಾ ಆಯೋಗ ಮತ್ತು ಪೊಲೀಸರಿಗೆ ಮನವಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

Karnataka State Commission for Women ಏಪ್ರಿಲ್ 25ರಂದು ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದ ಎಸ್‌ಡಿಪಿಐ ಕಾನೂನು ಘಟಕದ ರಾಜ್ಯ ಉಸ್ತುವಾರಿ ಬಿ.ಆರ್ ಭಾಸ್ಕರ್ ಪ್ರಸಾದ್ ಅವರು, “ಪೋಲಿಸ್ ಮಹಾ ನಿರ್ದೇಶನಕರು ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ಎಸ್‌ಡಿಪಿಐ ದೂರು ನೀಡಿ, ಹಾಸನದ ಪೆನ್ ಡ್ರೈವ್ ಲೈಂಗಿಕ ಹಗರಣದ ಬಗ್ಗೆ ಸೂಕ್ತ ತನಿಖೆಗೆ ಮತ್ತು ಮಹಿಳೆಯರ ರಕ್ಷಣೆಗೆ ಮನವಿ ಮಾಡಿತ್ತು. ದೂರಿಗೆ ಸ್ಪಂದಿಸಿದ ಮಹಿಳಾ ಆಯೋಗವು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆಗಾಗಿ ವಿಶೇಷ ತನಿಖಾ ತಂಡ ಎಸ್‌ಐಟಿ ರಚಿಸಲು ಕೋರಿ ಸರ್ಕಾರಕ್ಕೆ ಪತ್ರ ಬರೆದು ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದೆ” ಎಂದು ತಿಳಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...