Monday, February 2, 2026
Monday, February 2, 2026

Shivamogga Police ಗಾಜನೂರು ಬಳಿ ಅಪಘಾತ ಬೈಕ್ ಸವಾರ ಸಾವು

Date:

ಗಾಜನೂರು ಬಳಿಯಲ್ಲಿ ನಿನ್ನೆ ಸಂಜೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈತ ಸೊರಬದ ಮೂಲದವರು ಎನ್ನಲಾಗಿದ್ದು, ಆತನ ವಿವರ ತಿಳಿದುಬಂದಿಲ್ಲ.

ಗಾಜನೂರು ಸಮೀಪದ ವೀರಾಪುರದ ಬಳಿ ಸಿಗುವ ಕ್ರಾಸ್‌ ಹತ್ತಿರ ಈ ಘಟನೆ ಸಂಭವಿಸಿದೆ. ಟೈಲ್ಸ್‌ ತುಂಬಿಕೊಂಡು ಬರುತ್ತಿದ್ದ ಆಪೆ ಗಾಡಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದೆ.

Shivamogga Police ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಪೆಟ್ಟು ಬಿದ್ದು ‍ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನೆ ಭೀಕರತೆ ಎಷ್ಟಿತ್ತು ಎಂದರೇ , ಬೈಕ್‌ ಸವಾರನ ಒಂದು ಕೈ ಸಂಪೂರ್ಣವಾಗಿ ತುಂಡಾಗಿ ರಸ್ತೆ ಬದಿಗೆ ಹಾರಿ ಬಿದ್ದಿತ್ತು. ಇನ್ನೂ ತಲೆಯಿಂದ ತೀವ್ರ ರಕ್ತಸ್ರಾವವಾಗಿ ಆತ ಅಲ್ಲಿಯೇ ಸಾವನ್ನಪ್ಪಿದ್ದಾನೆ.
ಸ್ಥಳೀಯರು ತುರ್ತುಕರೆ ಮಾಡಿ ಆಂಬುಲೆನ್ಸ್‌ಗೆ ಬರುವಂತೆ ತಿಳಿಸಿದ್ದರಾದರೂ ಅಷ್ಟರಲ್ಲಿ ಬೈಕ್‌ ಸವಾರನ ಜೀವ ಹೋಗಿತ್ತು. ಇನ್ನೂ ಈ ಸಂಬಂಧ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...