Wednesday, December 17, 2025
Wednesday, December 17, 2025

Siddharamaih ಸುಪ್ರೀಂ ಕೋರ್ಟ್ ಆದೇಶದನ್ವಯ ರಾಜ್ಯ ಬರಪರಿಹಾರ ಬಿಡುಗಡೆ, ರಾಜ್ಯ ಬಿಜೆಪಿ ನಾಯಕರ ಪಾತ್ರವೇನೂ ಇಲ್ಲ-ಸಿದ್ಧರಾಮಯ್ಯ

Date:

Siddharamaih ಎನ್‌ಡಿಆರ್‌ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ 18,171 ಕೋಟಿ ರೂಪಾಯಿ ಬರ ಪರಿಹಾರ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3,498.98 ಕೋಟಿ ರೂ.ಗೆ ಅನುಮೋದನೆ ನೀಡಿ, 3,454 ಕೋಟಿ ರೂ. ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3, 454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ ಎಂಬ ಸುದ್ದಿಯ ಬೆನ್ನಲ್ಲೇ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರ ಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರವು ರಾಜಕೀಯ ದುರುದ್ದೇಶದಿಂದ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಮೋದಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದು ತಿಳಿಸಿದ್ದಾರೆ.
Siddharamaih ಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯ ಬಿಜೆಪಿ ನಾಯಕರದ್ದಾಗಲಿ, ಕೇಂದ್ರ ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.
ಈ ಬರ ಪರಿಹಾರ ಬಿಡುಗಡೆಯ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...