Friday, April 18, 2025
Friday, April 18, 2025

H.D.Revanna ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ:‌ಎಸ್ ಐ ಟಿ ಯಿಂದ ಐವರು ಸಂತ್ರಸ್ತೆಯರ ವಿಚಾರಣೆ

Date:

H.D. Revanna ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಹಾಗೂ ಅವರ ಪುತ್ರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ.

ಈ ಮಧ್ಯೆ, ಎಸ್‌ಐಟಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ. ಸದ್ಯ ಸುತ್ತುತ್ತಿರುವ ವಿಡಿಯೋಗಳ ಆಧಾರದ ಮೇಲೆ ಗುರುತಿಸಲ್ಪಟ್ಟ ಐವರು ಮಹಿಳೆಯರನ್ನು ಎಸ್‌ಐಟಿಯ ಹಿರಿಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ಸಂತ್ರಸ್ತರು ಆರೋಪಿಗಳ ಸಂಪರ್ಕಕ್ಕೆ ಬಂದಿದ್ದು ಹೇಗೆ ಮತ್ತು ಅವರ ಜೊತೆ ಲೈಂಗಿಕ ಕ್ರಿಯೆ ನಡೆಸುವಂತೆ ಬಲವಂತಪಡಿಸಿದ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸ್ ಅಧಿಕಾರಿಗಳು ಕೂಡ ವಿಡಿಯೋಗಳನ್ನು ಯಾರು ರೆಕಾರ್ಡ್ ಮಾಡಿದ್ದಾರೆ ಮತ್ತು ವಿಡಿಯೋ ಬಳಸಿ ಅವರಲ್ಲಿ ಯಾರನ್ನಾದರೂ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಸಂತ್ರಸ್ತರನ್ನು ಪ್ರಶ್ನಿಸಿದ್ದಾರೆ. ಸಂತ್ರಸ್ತರನ್ನು ಕೆಲವು ಗಂಟೆಗಳ ಕಾಲ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಯಿತು ಮತ್ತು ಅವರ ಹೇಳಿಕೆಗಳನ್ನು ಮಹಿಳಾ ಸಿಬ್ಬಂದಿ ದಾಖಲಿಸಿಕೊಂಡಿದ್ದಾರೆ.

H.D. Revanna ಎಚ್‌ಡಿ ರೇವಣ್ಣ – ಪ್ರಜ್ವಲ್ ರೇವಣ್ಣ
ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ಕೋರ್ ಕಮಿಟಿ ಸಭೆ ನಂತರ ಪ್ರಜ್ವಲ್ ರೇವಣ್ಣ ಉಚ್ಛಾಟನೆ ಸಾಧ್ಯತೆ!
ಈಮಧ್ಯೆ, ಪ್ರಜ್ವಲ್ ರೇವಣ್ಣ ದೇಶದಲ್ಲಿ ಇಲ್ಲದಿದ್ದರೂ, ತನಿಖೆಯ ಭಾಗವಾಗಿ ಆರೋಪಿಗಳಿಗೆ ನೋಟಿಸ್ ನೀಡಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ. ಶೀಘ್ರದಲ್ಲೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಅಲ್ಲದೆ, ಎಸ್‌ಐಟಿ ತಂಡವು ಹಾಸನದಲ್ಲಿರುವ ರೇವಣ್ಣ ನಿವಾಸ ಸೇರಿದಂತೆ ಇತರೆ ಸ್ಥಳಗಳಿಗೆ ಭೇಟಿ ನೀಡಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಸಾಧ್ಯತೆಯಿದೆ.

ತನಿಖಾ ಸಂಸ್ಥೆಯು ಸಂತ್ರಸ್ತರನ್ನು ಒಳಗೊಂಡಂತೆ ವ್ಯಕ್ತಿಗಳ ಸಹ ವಿಚಾರಣೆಗೆ ಕರೆಯಲು ಪಟ್ಟಿಯನ್ನು ಸಿದ್ಧಪಡಿಸುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....