Wednesday, October 2, 2024
Wednesday, October 2, 2024

SVEEP Shivamogga ರೇಡಿಯೊ ಶಿವಮೊಗ್ಗದಿಂದ ಮತದಾನ ಜಾಗೃತಿ ಕಾರ್ಯಕ್ರಮ

Date:

SVEEP Shivamogga ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸ್ವೀಪ್ ಸಮಿತಿ, ರೇಡಿಯೋ ಶಿವಮೊಗ್ಗ, ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರಾಷ್ಟ್ರೀಯ ಶಿಕ್ಷಣ ಸಮಿತಿ ಸಹಯೋಗದಲ್ಲಿ ಶಿವಮೊಗ್ಗದ ಜೆ ಎನ್ ಎನ್ ಸಿ ಇ ಕಾಲೇಜಿನ ಎಂಸಿಎ ವಿಭಾಗದಲ್ಲಿ ಮತದಾನ ಜಾಗೃತಿ ಹಾಗೂ ಪ್ರಥಮ ಬಾರಿಗೆ ಮತದಾನ ಮಾಡುತ್ತಿರುವವರಿಗೆ ಮತದಾನದ ಅರಿವು ಮೂಡಿಸುವ ಸರಣಿ ಕಾರ್ಯಕ್ರಮವನ್ನು ನಡೆಸಲಾಯಿತು

ಜಿಲ್ಲಾ ಸ್ವೀಪ್ ಸಮಿತಿಯ ರಾಜ್ಯ ಮಟ್ಟದ ತರಬೇತುದಾರ ನವೀದ್ ಅಹ್ಮದ್ ಪರ್ವೇಜ್ ಮತದಾನದ ಅರಿವು ನೀಡಿ, ಮತದಾನದ ಪ್ರತಿಜ್ಞೆ ಬೋಧಿಸಿದರು. ಇದರ ಜೊತೆಗೆ ಪಿಪಿಟಿ ಮುಖಾಂತರವಾಗಿ ಚುನಾವಣಾ ರಸಪ್ರಶ್ನೆ ನಡೆಸಿಕೊಟ್ಟರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ ರಾವ್, ಪ್ರಾಚಾರ್ಯ ವೈ. ವಿಜಯಕುಮಾರ್, ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸಮೂರ್ತಿ, ಪರಿಸರ ಅಧ್ಯಯನ ಕೇಂದ್ರದ ಸಂಯೋಜಕ ದಿನೇಶ್ ಹೊಸನಗರ, ರೇಡಿಯೋ ಶಿವಮೊಗ್ಗದ ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ, ಅಭಿನಾಟ್ಯ ಇನ್ನಿತರರಿದ್ದರು.

SVEEP Shivamogga ಏಪ್ರಿಲ್ 30ರಂದು ಮತದಾನ ಜಾಗೃತಿ ಕಾರ್ಯಕ್ರಮವನ್ನು ಶಿವಮೊಗ್ಗ ಮಹಾನಗರಪಾಲಿಕೆಯ ಸಹಯೋಗದೊಂದಿಗೆ ಪುರಲೆಯ ಸುಬ್ಬಯ್ಯ ಬೋಧನಾ ಆಸ್ಪತ್ರೆಯಲ್ಲಿ ನಡೆಸಲಾಯಿತು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ಪಾಲಿಕೆಯ ಅಧಿಕಾರಿಗಳಾದ ಅನುಪಮಾ ಹಾಗೂ ಸುಪ್ರಿಯಾ ತಿಳಿಸಿಕೊಟ್ಟರು. ಸುಬ್ಬಯ್ಯ ಬೋಧನಾ ಆಸ್ಪತ್ರೆಯ ಪ್ರಾಚಾರ್ಯ ಡಾ. ಸಿದ್ದಲಿಂಗಪ್ಪ ಸಿ.ಎಂ., ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ನಿರಂಜನಮೂರ್ತಿ, ಅಭಿನಾಟ್ಯ ಇದ್ದರು.

ರೇಡಿಯೋ ಶಿವಮೊಗ್ಗದ ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ ಚುನಾವಣಾ ರಸಪ್ರಶ್ನೆ ನಡೆಸಿಕೊಟ್ಟರು. ರೇಡಿಯೋ ಶಿವಮೊಗ್ಗನಿಲಯ ಸಂಯೋಜಕ ಗುರುಪ್ರಸಾದ್ ಬಾಲಕೃಷ್ಣ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...