Monday, December 15, 2025
Monday, December 15, 2025

SVEEP Shivamogga ರೇಡಿಯೊ ಶಿವಮೊಗ್ಗದಿಂದ ಮತದಾನ ಜಾಗೃತಿ ಕಾರ್ಯಕ್ರಮ

Date:

SVEEP Shivamogga ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸ್ವೀಪ್ ಸಮಿತಿ, ರೇಡಿಯೋ ಶಿವಮೊಗ್ಗ, ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರಾಷ್ಟ್ರೀಯ ಶಿಕ್ಷಣ ಸಮಿತಿ ಸಹಯೋಗದಲ್ಲಿ ಶಿವಮೊಗ್ಗದ ಜೆ ಎನ್ ಎನ್ ಸಿ ಇ ಕಾಲೇಜಿನ ಎಂಸಿಎ ವಿಭಾಗದಲ್ಲಿ ಮತದಾನ ಜಾಗೃತಿ ಹಾಗೂ ಪ್ರಥಮ ಬಾರಿಗೆ ಮತದಾನ ಮಾಡುತ್ತಿರುವವರಿಗೆ ಮತದಾನದ ಅರಿವು ಮೂಡಿಸುವ ಸರಣಿ ಕಾರ್ಯಕ್ರಮವನ್ನು ನಡೆಸಲಾಯಿತು

ಜಿಲ್ಲಾ ಸ್ವೀಪ್ ಸಮಿತಿಯ ರಾಜ್ಯ ಮಟ್ಟದ ತರಬೇತುದಾರ ನವೀದ್ ಅಹ್ಮದ್ ಪರ್ವೇಜ್ ಮತದಾನದ ಅರಿವು ನೀಡಿ, ಮತದಾನದ ಪ್ರತಿಜ್ಞೆ ಬೋಧಿಸಿದರು. ಇದರ ಜೊತೆಗೆ ಪಿಪಿಟಿ ಮುಖಾಂತರವಾಗಿ ಚುನಾವಣಾ ರಸಪ್ರಶ್ನೆ ನಡೆಸಿಕೊಟ್ಟರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ ರಾವ್, ಪ್ರಾಚಾರ್ಯ ವೈ. ವಿಜಯಕುಮಾರ್, ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸಮೂರ್ತಿ, ಪರಿಸರ ಅಧ್ಯಯನ ಕೇಂದ್ರದ ಸಂಯೋಜಕ ದಿನೇಶ್ ಹೊಸನಗರ, ರೇಡಿಯೋ ಶಿವಮೊಗ್ಗದ ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ, ಅಭಿನಾಟ್ಯ ಇನ್ನಿತರರಿದ್ದರು.

SVEEP Shivamogga ಏಪ್ರಿಲ್ 30ರಂದು ಮತದಾನ ಜಾಗೃತಿ ಕಾರ್ಯಕ್ರಮವನ್ನು ಶಿವಮೊಗ್ಗ ಮಹಾನಗರಪಾಲಿಕೆಯ ಸಹಯೋಗದೊಂದಿಗೆ ಪುರಲೆಯ ಸುಬ್ಬಯ್ಯ ಬೋಧನಾ ಆಸ್ಪತ್ರೆಯಲ್ಲಿ ನಡೆಸಲಾಯಿತು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ಪಾಲಿಕೆಯ ಅಧಿಕಾರಿಗಳಾದ ಅನುಪಮಾ ಹಾಗೂ ಸುಪ್ರಿಯಾ ತಿಳಿಸಿಕೊಟ್ಟರು. ಸುಬ್ಬಯ್ಯ ಬೋಧನಾ ಆಸ್ಪತ್ರೆಯ ಪ್ರಾಚಾರ್ಯ ಡಾ. ಸಿದ್ದಲಿಂಗಪ್ಪ ಸಿ.ಎಂ., ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ನಿರಂಜನಮೂರ್ತಿ, ಅಭಿನಾಟ್ಯ ಇದ್ದರು.

ರೇಡಿಯೋ ಶಿವಮೊಗ್ಗದ ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ ಚುನಾವಣಾ ರಸಪ್ರಶ್ನೆ ನಡೆಸಿಕೊಟ್ಟರು. ರೇಡಿಯೋ ಶಿವಮೊಗ್ಗನಿಲಯ ಸಂಯೋಜಕ ಗುರುಪ್ರಸಾದ್ ಬಾಲಕೃಷ್ಣ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...