Thursday, June 18, 2026
Thursday, June 18, 2026

Rahul Gandhi ಮೋದಿ ವಿರುದ್ಧ ಟೀಕಾಸ್ತ್ರ ಶಿವಮೊಗ್ಗದಲ್ಲಿ ಅಬ್ಬರಿಸಿದ ರಾಹುಲ್

Date:

Rahul Gandhi ಶಿವಮೊಗ್ಗದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ.ಇದೀಗ ಮಹಿಳೆಯರನ್ನು ಲಕ್ಷಾಧಿಪತಿಗಳನ್ನು ಮಾಡಲು ಹೊರಟಿದ್ದಾರೆ.
ರೇಪಿಸ್ಟ್ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಲು ಬಿಜೆಪಿ ಕಾರಣ‌.ಅವರ ಬಳಿ ಎಲ್ಲಾ ಸಂಸ್ಥಗಳಿದ್ದಾಗ್ಯೂ ಪ್ರಜ್ವಲ್ ಸುಲಭವಾಗಿ ಜರ್ಮನಿಗೆ ಹೋಗಲು ನೆರವಾಗಿದ್ದಾರೆ ಎಂದರು.

ರಾಜ್ಯದಲ್ಲಿ ನಾವು ೫ ಗ್ಯಾರಂಟಿ ಜಾರಿಗೊಳಿಸಿದ್ದೇವೆ.ಅದೇ ರೀತಿ ರಾಷ್ಟ್ರಮಟ್ಟದಲ್ಲೂ ಗ್ಯಾರಂಟಿ ಯೋಜನೆ ಜಾರಿಗೊಳಿಸಲಿದ್ದೇವೆ.ಮಹಾಲಕ್ಷ್ಮಿ ಯೋಜನೆಯಡಿ ಬಡ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 10 ಸಾವಿರ ನೀಡಲಿದ್ದೇವೆ.ಏಕೆಂದರೆ ಬಿಜೆಪಿಯವರು ದೇಶದ ಜನರನ್ನು ಬಡವರನ್ನಾಗಿ ಮಾಡಿದ್ದಾರೆ.ಈ ಯೋಜನೆಗಳಿಂದ ಮೋದಿಗೆ ಬೇಜಾರಾಗಿದೆ.ಏಕೆಂದರೆ ಅವರ 22 ಜನ ಶ್ರೀಮಂತರಿಗೆ ಈ ಯೋಜನೆಯ ನೆರವು ಸಿಗುವುದಿಲ್ಲ.ಅದೇ ರೀತಿ ಯುವ ಸಮೂಹಕ್ಕೆ ನೆರವು ನೀಡಲಿದ್ದೇವೆ.ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ವರ್ಷಕ್ಕೆ 1 ಲಕ್ಷ ನೀಡಲಿದ್ದೇವೆ ಎಂದು ತಿಳಿಸಿದರು.

Rahul Gandhi ತೆರವಾಗಿರುವ ೩೦ ಲಕ್ಷ ಹುದ್ದೆ ಭರ್ತಿ ಮಾಡಲಿದ್ದೇವೆ.ನರೇಗಾ ಯೋಜನೆಯಡಿ 250 ಕೂಲಿಯನ್ನು 400ಕ್ಕೆ ಹೆಚ್ಚಿಸಲಿದ್ದೇವೆ.ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲಾಗುವುದು.ರೈತರ ಸಾಲ ಮನ್ನಾ ಮಾಡಲಾಗುವುದು.ದೇಶದ ಪ್ರತಿಯೊಂದು ಕ್ಷೇತ್ರವನ್ನೂ ಬಿಜೆಪಿ ಖಾಸಗೀಕರಣ ಮಾಡಲು ಹೊರಟಿದೆ ಎಂದರು.

ಈ ಮೂಲಕ ಯುವಕರಿಗೆ ಸಿಗಬೇಕಿರುವ ಉದ್ಯೋಗಾವಕಾಶವನ್ನು ಕಸಿದುಕೊಳ್ಳಲು ಹೊರಟಿದೆ‌.
ಆದರೆ ಕಾಂಗ್ರೆಸ್ ಇದಕ್ಕೆ ಅವಕಾಶ ಮಾಡಿ ಕೊಡುವುದಿಲ್ಲ.ಬಿಜೆಪಿಯ ವಿರುದ್ಧ ಸಂಘಟಿತ ಹೋರಾಟ ನಡೆಸಲಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...