Friday, April 18, 2025
Friday, April 18, 2025

Dr. B.R.Ambedkar ಶಿಥಲವಾಗಿರುವ ಡಾ.ಅಂಬೇಡ್ಕರ್ ವಸತಿ ಶಾಲೆ: ಮರು ನಿರ್ಮಾಣಕ್ಕೆ ಬಿಎಸ್ ಪಿ ಮನವಿ

Date:

Dr. B.R.Ambedkar ಶಿಥಿಲಾವಸ್ಥೆಯಿಂದ ಕೂಡಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಕಟ್ಟಡವನ್ನು ನೂತನವಾಗಿ ನಿರ್ಮಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು ಎಂ ದು ಬಹುಜನ ಸಮಾಜ ಪಕ್ಷವು ಬುಧವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ನಗರದ ಪೊಲೀಸ್ ಲೇಔಟ್ ಸಮೀಪದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಟ್ಟಡ ಹಾಗೂ ಮೂಲ ಸೌಕರ್ಯಗಳ ಕೊರತೆಯಿಂದ ಮಕ್ಕ ಳು ನಲುಗುತ್ತಿರುವ ಪರಿಣಾಮ ವಿದ್ಯಾರ್ಜನೆಗೆ ತೀವ್ರ ಹಿನ್ನೆಡೆಯಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ಶಾಲೆಯ ಕಟ್ಟಡವು ಕಾಫಿ ಕ್ಯೂರಿಂಗ್‍ನಲ್ಲಿ ಎಸಿ ಸೀಟ್‍ನಿಂದ ರೂಫಿಂಗ್ ಮಾಡಲ್ಪಟ್ಟ ಜಾಗ ದಲ್ಲಿ ನಡೆಯುತ್ತಿದೆ. ಇದರ ಪಕ್ಕದಲ್ಲೇ ಕಾಫಿ ಕ್ಯೂರಿಂಗ್ ಹಾಗೂ ಹಿಂಬದಿ ಸಿಮೆಂಟ್ ಮೌಲ್ಡ್ ಇಟ್ಟಿಗೆ ಫ್ಯಾಕ್ಟ ರಿಗಳ ಕೆಲಸಗಳು ನಡೆಯುತ್ತಿರುವ ಕಾರಣ ಅತಿಯಾದ ದೂಳು ಎರಡು ಕಡೆಯಿಂದ ವಸತಿ ಶಾಲೆಗೆ ಆವರಿ ಸಿಕೊಳ್ಳುತ್ತಿದೆ ಎಂದು ತಿಳಿಸಿದರು.

ವಸತಿ ಶಾಲೆಯ ಕಟ್ಟಡವು ತೀವ್ರ ಶಿಥಿಲಾವಸ್ಥೆಯಿರುವ ಕಾರಣ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗಿದೆ. ಇಲಾಖೆಯ ನಿರ್ಲಕ್ಷ್ಯತನದಿಂದ ಮಕ್ಕಳು ಪ್ರತಿನಿತ್ಯ ಸ್ನಾನ ಹಾಗೂ ಪರಿಸರವಿಲ್ಲದೇ ನಲುಗಿ ಹೋಗು ತ್ತಿರುವ ಜೊತೆಗೆ ಉತ್ತಮವಾಗಿ ಅಭ್ಯಾಸಿಸಬೇಕಾದ ಮಕ್ಕಳು ಕ್ಲೀಷ್ಟೆಗೆ ಒಳಗಾಗುತ್ತಿದೆ. ಅಲ್ಲದೇ ಕಟ್ಟಡಕ್ಕೆ ಎರ ಡು ಲಕ್ಷ ರೂ. ಬಾಡಿಗೆ ನೀಡುತ್ತಿರುವುದು ಕಂಡುಬಂದಿದೆ ಎಂದರು.

Dr. B.R.Ambedkar ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಖುದ್ದು ಸ್ಥಳ ಪರಿಶೀಲನೆ ನಡೆಸಿ ನೂತನ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಸದ್ಯಕ್ಕೆ ಸುಸಜ್ಜಿತವಾದ ಕಟ್ಟಡಕ್ಕೆ ವಸತಿ ಶಾಲೆಯನ್ನು ವರ್ಗಾಯಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ, ತಾಲ್ಲೂಕು ಅಧ್ಯಕ್ಷ ಹೆಚ್.ಕುಮಾರ್, ಉಪಾಧ್ಯಕ್ಷೆ ಕೆ.ಎಸ್.ಮಂಜುಳಾ, ಪ್ರಧಾನ ಕಾರ್ಯದರ್ಶಿ ಆರ್.ವಸಂತ್, ಮುಖಂಡರುಗಳಾದ ಗಂಗಾ ಧರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....